ಸಂಗ್ರಹ ಚಿತ್ರ 
ರಾಜ್ಯ

ನಮ್ಮ ಮೆಟ್ರೋ: ಮರಗಳ ಸ್ಥಳಾಂತರಕ್ಕೆ ಬಿಎಂಆರ್'ಸಿಎಲ್'ಗೆ ಹೈಕೋರ್ಟ್ ಅನುಮತಿ

ನಮ್ಮ‌ ಮೆಟ್ರೋ 2ನೇ ಹಂತದಲ್ಲಿನ ನಾಗವಾರ-ಗೊಟ್ಟಿಗೆರೆ ಮಾರ್ಗದ ಹಲವು ಕಡೆ ಮರಗಳನ್ನು ಸ್ಥಳಾಂತರಿಸಲು ಬೆಂಗಳೂರು ಮೆಟ್ರೊ ರೈಲು ನಿಗಮಕ್ಕೆ (ಬಿಎಂಆರ್‌ಸಿಎಲ್) ಹೈಕೋರ್ಟ್ ಮಂಗಳವಾರ ಅನುಮತಿ ನೀಡಿದೆ.

ಬೆಂಗಳೂರು: ನಮ್ಮ‌ ಮೆಟ್ರೋ 2ನೇ ಹಂತದಲ್ಲಿನ ನಾಗವಾರ-ಗೊಟ್ಟಿಗೆರೆ ಮಾರ್ಗದ ಹಲವು ಕಡೆ ಮರಗಳನ್ನು ಸ್ಥಳಾಂತರಿಸಲು ಬೆಂಗಳೂರು ಮೆಟ್ರೊ ರೈಲು ನಿಗಮಕ್ಕೆ (ಬಿಎಂಆರ್‌ಸಿಎಲ್) ಹೈಕೋರ್ಟ್ ಮಂಗಳವಾರ ಅನುಮತಿ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ಸೂರಜ್ ಗೋವಿಂದ್ ರಾಜ್ ಅವರ ನೇತೃತ್ವದ ವಿಭಾಗೀಯ ಪೀಠ ಈ ಅನುಮತಿ ನೀಡಿತು. ತೆರವುಗೊಳಿಸುವ ಮರಗಳಿಗೆ ಪರ್ಯಾಯವಾಗಿ ನೆಡಲಾಗುವ ಸಸಿಗಳ (ಅರಣ್ಯೀಕರಣ) ವಿವರ ಒಳಗೊಂಡ ವರದಿ ನೀಡುವಂತೆಯೂ ಸೂಚಿಸಿತು.

ತಜ್ಞರ‌ ಸಮಿತಿ ಸಲಹೆಯಂತೆ ನಿಗಮವು ಮೆಟ್ರೋ ನಿರ್ಮಾಣಕ್ಕಾಗಿ ಈ ಮಾರ್ಗದಲ್ಲಿ ಮರಗಳನ್ನು‌ ಕಡಿಯಲು ಮತ್ತು ಸ್ಥಳಾಂತರಿಸಲು ನ್ಯಾಯಾಲಯದ ಅನುಮತಿ ಕೋರಿತ್ತು. ಅಲ್ಲದೆ, 2021ರ ಮಾರ್ಚ್‌ನಿಂದ ಮೇ ತಿಂಗಳ ಅವಧಿಯಲ್ಲಿ ಈ ಕುರಿತು ಹಲವು ಅಧಿಸೂಚನೆಗಳನ್ನೂ ಹೊರಡಿಸಿತ್ತು.

‘ಮರಗಳನ್ನು ಸ್ಥಳಾಂತರಿಸುವ ವೇಳೆ ತಾನು ನೇಮಿಸಿದ ಅಧಿಕಾರಿ ಅಥವಾ ವೃಕ್ಷ ಅಧಿಕಾರಿಯು ಹಾಜರಿರಬೇಕು. ಮರಗಳ ನಿರ್ವಹಣೆ ಮತ್ತು ಸಂರಕ್ಷಣೆ ಕುರಿತಂತೆ ಪ್ರತಿ ಮೂರು ತಿಂಗಳಿಗೊಮ್ಮೆ ಬಿಎಂಆರ್‌ಸಿಎಲ್‌ನಿಂದ ಮಾಹಿತಿ ಪಡೆದು, ಆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು’ ಎಂದೂ ಪೀಠವು ನಿರ್ದೇಶಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Hockey Asia Cup 2025: ಹಾಲಿ ಚಾಂಪಿಯನ್ ದಕ್ಷಿಣ ಕೊರಿಯಾ ವಿರುದ್ಧ ಭಾರತ 4-1 ಗೆಲುವು; 8 ವರ್ಷಗಳ ಬಳಿಕ ಪ್ರಶಸ್ತಿ, ವಿಶ್ವಕಪ್ ಗೆ ಅರ್ಹತೆ!

'ತಂಡದಲ್ಲಿರಲು ಅರ್ಹನಾಗಿರುವಾಗ... ಬೇಸರ': ಕೊನೆಗೂ ಮೌನ ಮುರಿದ Shreyas Iyer

'ಧೈರ್ಯ ತೋರಿಸಿ, ಅಮೆರಿಕದ ಆಮದುಗಳ ಮೇಲೆ ಶೇ. 75 ರಷ್ಟು ಸುಂಕ ವಿಧಿಸಿ': ಪ್ರಧಾನಿ ಮೋದಿಗೆ ಕೇಜ್ರಿವಾಲ್ ಸವಾಲು

Ashoka emblem ಧ್ವಂಸ ಪ್ರಕರಣ: 50 ಮಂದಿ ಪೊಲೀಸ್ ವಶಕ್ಕೆ! ಬುರ್ಖಾಧಾರಿ ಮಹಿಳೆಯರಿಗೂ ಸಂಕಷ್ಟ!

ಬಿಹಾರದ ಮಹಾಮೈತ್ರಿಕೂಟಕ್ಕೆ ಹೊಸ ಪಕ್ಷಗಳ ಸೇರ್ಪಡೆ; ಸೀಟು ಹಂಚಿಕೆ ಮತ್ತಷ್ಟು ಕಠಿಣ!

SCROLL FOR NEXT