ಕಲಬುರಗಿ: ನಗರದ ವಿವಿದೆಡೆ ದ್ವಿಚಕ್ರ ವಾಹನ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರೂ ಆರೋಪಿಗಳನ್ನು ಸ್ಟೇಷನ್ ಬಜಾರ್ ಪೊಲೀಸರು ಬಂಧಿಸಿದ್ದಾರೆ.
ಮಲ್ಲಿಕಾರ್ಜುನ (21), ಪ್ರಸಾದ್ ಬಿದನೂರು (22) ಬಂಧಿತ ಆರೋಪಿಗಳು.
ಬಂಧಿತರಿಂದ ಒಟ್ಟು 16 ದ್ವಿಚಕ್ರ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಬಂಧಿತ ಆರೋಪಿಗಳು ನಗರದ ಕೇಂದ್ರಿಯ ಬಸ್ಸು ನಿಲ್ದಾಣ, ಸೂಪರ್ ಮಾರ್ಕೆಟ್ ಹಾಗೂ ಚೌಕ್ ವೃತ್ತ ಸುತ್ತಮುತ್ತ ಕಳೆದ ಒಂದು ವರ್ಷಹಿಂದೆ ಕಳ್ಳತನ ಮಾಡಿದ್ದ 16 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದಲ್ಲಿ ಮತ್ತೋರ್ವ ಸಿದ್ದು ಎಂಬಾತ ಭಾಗಿಯಾಗಿದ್ದು, ಸದ್ಯ ಆತ ತಲೆಮರಿಸಿಕೊಂಡಿದ್ದಾನೆ. ಆರೋಪಿಗಾಗಿ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.