ಆಮ್ಲಜನಕ ಪೂರೈಕೆ ಕೇಂದ್ರಗಳ ಸ್ಥಾಪನೆ: ಬಿಬಿಎಂಪಿ ಆಯುಕ್ತ 
ರಾಜ್ಯ

ಆಮ್ಲಜನಕ ಪೂರೈಕೆ ಕೇಂದ್ರಗಳ ಸ್ಥಾಪನೆ: ಬಿಬಿಎಂಪಿ ಆಯುಕ್ತ

ಆಕ್ಸಿಜನ್ ತುರ್ತಾಗಿ ಅಗತ್ಯವಿರುವ ಕೋವಿಡ್-19 ರೋಗಿಗಳಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಆಮ್ಲಜನಕ ಪೂರೈಕೆ ಕೇಂದ್ರಗಳ ಸ್ಥಾಪನೆ ಮಾಡಲಾಗಿದೆ ಎಂದು ಬಿಬಿಎಂಪಿ ಅಯುಕ್ತ ಗೌರವ್ ಗುಪ್ತ ಹೇಳಿದ್ದಾರೆ. 

ಬೆಂಗಳೂರು: ಆಕ್ಸಿಜನ್ ತುರ್ತಾಗಿ ಅಗತ್ಯವಿರುವ ಕೋವಿಡ್-19 ರೋಗಿಗಳಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಆಮ್ಲಜನಕ ಪೂರೈಕೆ ಕೇಂದ್ರಗಳ ಸ್ಥಾಪನೆ ಮಾಡಲಾಗಿದೆ ಎಂದು ಬಿಬಿಎಂಪಿ ಅಯುಕ್ತ ಗೌರವ್ ಗುಪ್ತ ಹೇಳಿದ್ದಾರೆ. 

ಹೆಲ್ಪ್ ಡೆಸ್ಕ್, ಕೋವಿಡ್ ಕೇರ್ ಕೇಂದ್ರಗಳು, ಕಿದ್ವಾಯಿ ಹಾಗೂ ಅಪೋಲೋ ಆಸ್ಪತ್ರೆಗಳಿಗೆ ಭೇಟಿ ನೀಡಿದಾಗ ಮಾಧ್ಯಮಗಳೊಂದಿಗೆ ಮಾತನಾಡಿರುವ ಗೌರವ್ ಗುಪ್ತ, 10 ಹೆರಿಗೆ ಆಸ್ಪತ್ರೆಗಳನ್ನು  ಆಮ್ಲಜನಕ ಪೂರೈಕೆ ಕೇಂದ್ರಗಳನ್ನಾಗಿ ಮಾರ್ಪಡಿಸಲಾಗಿದೆ. 

ಈ ಆಸ್ಪತ್ರೆಗಳಲ್ಲಿ ತುರ್ತು ಅಗತ್ಯವಿರುವವರಿಗೆ ಸಹಾಯ ದೊರೆಯಲಿದ್ದು ಟ್ರಯೇಜಿಂಗ್ ಮೂಲಕ ವೈದ್ಯರು ಯಾರಿಗೆ ಆಕ್ಸಿಜನ್ ತುರ್ತಾಗಿ ಅವಶ್ಯಕತೆ ಇದೆ ಎಂಬುದನ್ನು ಖಚಿತಪಡಿಸಿಕೊಂಡು ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗಳಿಗೆ ಶಿಫಾರಸು ಮಾಡಲಿದ್ದಾರೆ ಎಂದು ಗುಪ್ತ ವಿವರಿಸಿದ್ದಾರೆ. 

ರಾಜಾಜಿನಗರ ಹೆರಿಗೆ ಆಸ್ಪತ್ರೆ, ಕಾವೇರಿಪುರ ಹೆರಿಗೆ ಆಸ್ಪತ್ರೆ, ಗವಿಪುರಂ ಗುಟ್ಟಳ್ಳಿ ರೆಫರೆಲ್ ಹೆರಿಗೆ ಆಸ್ಪತ್ರೆ, ಆಜಾದ್ ನಗರ, ಪೊಬ್ಬತಿ ಹೆರಿಗೆ ಆಸ್ಪತ್ರೆ, ಮಾಗಡಿ ರಸ್ತೆ ಹೆರಿಗೆ ಆಸ್ಪತ್ರೆ, ಆಡುಗೋಡಿ ಹೆರಿಗೆ ಆಸ್ಪತ್ರೆ, ತಾವರೆಕೆರೆ ಹೆರಿಗೆ ಆಸ್ಪತ್ರೆ, ಹೊಸಕೆರೆ ರೆಫರೆಲ್ ಆಸ್ಪತ್ರೆ, ಶಾಂತಿನಗರ್ ಹೆರಿಗೆ ಆಸ್ಪತ್ರೆ, ವಿಲ್ಸನ್ ಗಾರ್ಡನ್ ಹೆರಿಗೆ ಆಸ್ಪತ್ರೆಗಳನ್ನು ಆಮ್ಲಜನಕ ಪೂರೈಕೆ ಕೇಂದ್ರಗಳನ್ನಾಗಿ ಮಾರ್ಪಾಡು ಮಾಡಿಕೊಳ್ಳಲಾಗಿದೆ. 

ಮನೆಯಲ್ಲಿ ಐಸೊಲೇಷನ್ ನಲ್ಲಿರುವವರು ಆಕ್ಸಿಜನ್ ಅಗತ್ಯವಿದ್ದಲ್ಲಿ, ಈ ಕೇಂದ್ರಗಳಿಗೆ ದಾಖಲಾಗಬಹುದಾಗಿದೆ. ಇದನ್ನು ಹೊರತುಪಡಿಸಿ, ಮನೆಯಲ್ಲಿರುವವರಿಗೆ ಆಕ್ಸಿಜನ್ ಅಗತ್ಯವಿದ್ದಲ್ಲಿ ಸಹಾಯ ಮಾಡಲು ಒಂದು ತಂಡ ಯತ್ನಿಸುತ್ತಿದೆ ಎಂದು ಗೌರವ್ ಗುಪ್ತ ಮಾಹಿತಿ ನೀಡಿದ್ದಾರೆ. 

ಇನ್ನು ಟೆಸ್ಟಿಂಗ್ ಬಗ್ಗೆಯೂ ಗೌರವ್ ಗುಪ್ತ ಮಾಹಿತಿ ನೀಡಿದ್ದು, ಕಿದ್ವಾಯಿ ಮೆಮೊರಿಯಲ್ ಇನ್ಸ್ಟಿಟ್ಯೂಟ್ ಆಫ್ ಆಂಕೊಲಾಜಿಯಲ್ಲಿ ಸ್ವಯಂಚಾಲಿತ ಟೆಸ್ಟಿಂಗ್ ಸೌಲಭ್ಯವಿದ್ದು, ದಿನವೊಂದಕ್ಕೆ 6,000 ಸ್ಯಾಂಪಲ್ ಗಳನ್ನು ಪರೀಕ್ಷೆ ಮಾಡುವ ಬದಲು ಅದನ್ನು 20,000 ಕ್ಕೆ ಏರಿಕೆ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಇದೆ ವೇಳೆ ಬಿಯು ನಂಬರ್ ಗಳನ್ನು ನೀಡುವುದರಲ್ಲಿ ಉಂಟಾಗುತ್ತಿರುವ ವಿಳಂಬದ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತರು ತಿಳಿಸಿದ್ದಾರೆ. 

50 ಪ್ರಮುಖ ಆಸ್ಪತ್ರೆಗಳಲ್ಲಿ ನಾಗರಿಕ ಸೇವಾ ಡೆಸ್ಕ್ ಗಳನ್ನು ತೆರೆಯಲಾಗುತ್ತಿದ್ದು ಈ ಪೈಕಿ ಈಗಾಗಲೇ 25 ಸ್ಥಾಪನೆಯಾಗಿದೆ. 24*7 ಡೆಸ್ಕ್ ಗಳು ಜನರ ಗೊಂದಲಗಳಿಗೆ ಪರಿಹಾರ ಒದಗಿಸುವ ಕೆಲಸಗಳನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT