ಬಸವಕಲ್ಯಾಣ ಕ್ಷೇತ್ರದಲ್ಲಿ ಮತಎಣಿಕೆ ಕೇಂದ್ರದಲ್ಲಿರುವ ಸಿಬ್ಬಂದಿಗಳು 
ರಾಜ್ಯ

ಕರ್ನಾಟಕ ಉಪಚುನಾವಣಾ ಕದನ: ಮತ ಎಣಿಕೆ ಪ್ರಕ್ರಿಯೆ ಆರಂಭ

ಮಹಾಮಾರಿ ಕೊರೋನಾ ಸೋಂಕು ಆತಂಕದ ನಡುವಲ್ಲೂ ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಿಗ್ಗೆ 8ರಿಂದ ಆರಂಭವಾಗಿದೆ. 

ಬೆಂಗಳೂರು: ಮಹಾಮಾರಿ ಕೊರೋನಾ ಸೋಂಕು ಆತಂಕದ ನಡುವಲ್ಲೂ ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಿಗ್ಗೆ 8ರಿಂದ ಆರಂಭವಾಗಿದೆ. 

ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ಜಿದ್ದಾಜಿದ್ದಿಯ ಹಣಾಹಣಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಸಾಕ್ಷಿಯಾಗಿತ್ತು. ಬಿಜೆಪಿಯ ಮಂಗಳಾ ಸುರೇಶ ಅಂಗಡಿ ಮತ್ತು ಕಾಂಗ್ರೆಸ್‌ನಿಂದ ಸತೀಶ ಜಾರಕಿಹೊಳಿ ಸ್ಪರ್ಧಿಸಿದ್ದಾರೆ.

ಕೋವಿಡ್–19 ಹಿನ್ನೆಲೆಯಲ್ಲಿ ಕೊಠಡಿಯೊಂದರಲ್ಲಿ ಕೇವಲ 2 ಟೇಬಲ್‌ಗಳಲ್ಲಿ ಮಾತ್ರ ಎಣಿಕೆ ಪ್ರಕ್ರಿಯೆ ನಡೆಯಲಿದ್ದು, ಒಟ್ಟು 17 ಕೊಠಡಿಗಳನ್ನು ಬಳಸಲಾಗುತ್ತಿದೆ. ಹೀಗಾಗಿ, ರಾತ್ರಿ 8ರ ಸುಮಾರಿಗೆ ಅಧಿಕೃತ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಬೆಳಗಾವಿ ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ. 

ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರತಾಪಗೌಡ ಪಾಟೀಲ ಹಾಗೂ ಕಾಂಗ್ರೆಸ್‌ನಿಂದ ಬಸನಗೌಡ ತುರ್ವಿಹಾಳ ಸೇರಿ ಎಂಟು ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿಯಿಂದ ಶರಣು ಸಲಗರ, ಕಾಂಗ್ರೆಸ್‌ನಿಂದ ಮಾಲಾ ಬಿ.ನಾರಾಯಣರಾವ್, ಜೆಡಿಎಸ್‌ನಿಂದ ಸೈಯದ್ ಯಸ್ರಬ್ ಅಲಿ ಖಾದ್ರಿ, ಪಕ್ಷೇತರರಾಗಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಸೇರಿದಂತೆ 12 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಕರ್ನಾಟಕ ಸೇರಿ 10 ರಾಜ್ಯಗಳ ಉಪಚುನಾವಣೆ ಮತ ಎಣಿಕೆ ಪ್ರಕ್ರಿಯೆ ಆರಂಭ
ಕರ್ನಾಟಕದ ಮೂರು ಕ್ಷೇತ್ರಗಳೂ ಸೇರಿದಂತೆ ದೇಶದ ಒಟ್ಟು 10 ರಾಜ್ಯಗಳಲ್ಲೂ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. 

ಕರ್ನಾಟಕದ 3 ಕ್ಷೇತ್ರಗಳು ಸೇರಿದಂತೆ ಆಂಧ್ರಪ್ರದೇಶದ ತಿರುಪತಿ, ಕೇರಳದ ಮಲಪ್ಪುರಂ, ತಮಿಳುನಾಡಿನ ಕನ್ಯಾಕುಮಾರಿ ಸೇರಿದಂತೆ ಒಟ್ಟು 10 ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗಳ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

ಮ್ಯೂಚುವಲ್ ಫಂಡ್‌ಗಳ ಈಕ್ವಿಟಿ ಖರೀದಿ ಶೇ. 13% ರಷ್ಟು ಏರಿಕೆ!

SCROLL FOR NEXT