ಸಂಗ್ರಹ ಚಿತ್ರ 
ರಾಜ್ಯ

ಕಲಬುರಗಿ: ವೆಂಟಿಲೇಟರ್ ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರೂ ಆಸ್ಪತ್ರೆ ಸಿಬ್ಬಂದಿ ಕೊರತೆಯಿಂದಾಗಿ 4 ಸೋಂಕಿತರು ಸಾವು

ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿದ್ದ ನಾಲ್ವರು ಕೊರೋನಾ ಸೋಂಕಿತರು ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರೂ, ಸಿಬ್ಬಂದಿಗಳ ಕೊರತೆಯಿಂದಾಗಿ ಸಾವನ್ನಪ್ಪಿರುವ ಘಟನೆ ಕಲಬುರಗಿಯ ಆಳಂದ ತಾಲೂಕು ಆಸ್ಪತ್ರೆಯಲ್ಲಿ ಸೋಮವಾರ ನಡೆದಿದೆ. 

ಕಲಬುರಗಿ: ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿದ್ದ ನಾಲ್ವರು ಕೊರೋನಾ ಸೋಂಕಿತರು ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರೂ, ಸಿಬ್ಬಂದಿಗಳ ಕೊರತೆಯಿಂದಾಗಿ ಸಾವನ್ನಪ್ಪಿರುವ ಘಟನೆ ಕಲಬುರಗಿಯ ಆಳಂದ ತಾಲೂಕು ಆಸ್ಪತ್ರೆಯಲ್ಲಿ ಸೋಮವಾರ ನಡೆದಿದೆ. 

ಈ ಕುರಿತು ಆಳಂದ ತಾಲೂಕು ಆರೋಗ್ಯಾಧಿಕಾರಿ ಡಾ.ಅಭಯ್ ಕುಮಾರ್ ಅವರು ಮಾಹಿತಿ ನೀಡಿದ್ದು, ಆಸ್ಪತ್ರೆಯಲ್ಲಿ ಕಳೆದ ಕೆಲವು ದಿಗಳಿಂದ 16 ಕೊರೋನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ 70 ವರ್ಷ ಮೇಲ್ಪಟ್ಟ ಹಾಗೂ ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿದ್ದ ನಾಲ್ವರು ಆಕ್ಸಿಜನ್ ಬೆಂಬಲ ನೀಡಿದ್ದರೂ ಸಾವನ್ನಪ್ಪಿದ್ದಾರೆಂದು ಹೇಳಿದ್ದಾರೆ. 

ಆಸ್ಪತ್ರೆಯಲ್ಲಿ ಒಟ್ಟು ವೆಂಟಿಲೇಟರ್ ಹಾಸಿಗೆಗಳಿದ್ದು, ಜನರಲ್ ಮೆಡಿಸಿನ್'ಗೆ ತಜ್ಞರ ವೈದ್ಯರಿಲ್ಲ. ಪ್ರಮುಖವಾಗಿ ವೆಂಟಿಲೇಟರ್ ಬೆಂಬಲ ಪಡೆದ ಸೋಂಕಿತರನ್ನು ನೋಡಿಕೊಳ್ಳಲು ಆಸ್ಪತ್ರೆಯಲ್ಲಿ ಸಿಬ್ಬಂದಿಗಳಿಲ್ಲ. ಇದಲ್ಲದೆ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞರೂ ಕೂಡ ಇಲ್ಲ. ಅರಿವಳಿಕೆ ತಜ್ಞರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 

ಈ ನಡುವೆ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಸೋಂಕಿತ ವ್ಯಕ್ತಿಗಳ ಸಂಬಂಧಿಕರು ಸೋಂಕಿತನರ್ನು ಕಲಬುರಗಿಯ ಜಿಮ್ಸ್'ಗೆ ದಾಖಲು ಮಾಡುವಂತೆ ಸಲಹೆ ನೀಡಲಾಗುತ್ತಿದೆ. ಆದರೆ, ಕುಟುಂಬಸ್ಥರು ತಾಲೂಕು ಆಸ್ಪತ್ರೆಯಲ್ಲಿಯೇ ಇರಿಸುವುದಾಗಿ ಹೇಳುತ್ತಿದ್ದಾರೆಂದು ಆಭಯ್ ಕುಮಾರ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT