ಅಫಜಲಪುರ ತಾಲ್ಲೂಕು ಆಸ್ಪತ್ರೆ 
ರಾಜ್ಯ

ರಾಜ್ಯದಲ್ಲಿ ಮತ್ತೊಂದು ದುರಂತ: ಕಲಬುರಗಿಯಲ್ಲಿ ಆಕ್ಸಿಜನ್ ಸಿಗದೆ ನಾಲ್ವರು ಕೋವಿಡ್ ರೋಗಿಗಳು ಸಾವು

ನಿನ್ನೆ ತಾನೆ ಚಾಮರಾಜನಗರದಲ್ಲಿ ಆಮ್ಲಜನಕ ಸರಿಯಾದ ಸಮಯಕ್ಕೆ ಸಿಕ್ಕದ ಕಾರಣ 24 ಜನ ಸಾವನ್ನಪ್ಪಿರುವ ದುರ್ಘಟನೆ ಮರೆಯುವ ಮುನ್ನವೇ ಮತ್ತೊಂದು ಘಟನೆಯಲ್ಲಿ ಮಂಗಳವಾರ ಬೆಳಿಗ್ಗೆ ಕರ್ನಾಟಕದ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ 4 ಕೋವಿಡ್-19 ರೋಗಿಗಳು ಆಮ್ಲಜನಕದ ಕೊರತೆಯಿಂದ ಸಾವನ್ನಪ್ಪಿದ್ದಾರೆ.

ಕಲಬುರಗಿ: ನಿನ್ನೆ ತಾನೆ ಚಾಮರಾಜನಗರದಲ್ಲಿ ಆಮ್ಲಜನಕ ಸರಿಯಾದ ಸಮಯಕ್ಕೆ ಸಿಕ್ಕದ ಕಾರಣ 24 ಜನ ಸಾವನ್ನಪ್ಪಿರುವ ದುರ್ಘಟನೆ ಮರೆಯುವ ಮುನ್ನವೇ ಮತ್ತೊಂದು ಘಟನೆಯಲ್ಲಿ ಮಂಗಳವಾರ ಬೆಳಿಗ್ಗೆ ಕರ್ನಾಟಕದ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ 4 ಕೋವಿಡ್-19 ರೋಗಿಗಳು ಆಮ್ಲಜನಕದ ಕೊರತೆಯಿಂದ ಸಾವನ್ನಪ್ಪಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆ ಇರುವುದರಿಂದ ರೋಗಿಗಳು ದಾಖಲಾದ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಸಂಖ್ಯೆಯ  ಸಾವು ಸಂಭವಿಸಿದೆ.

ಅಧಿಕೃತ ಮೂಲಗಳ ಪ್ರಕಾರ, ಆಸ್ಪತ್ರೆಯಲ್ಲಿ ಆಮ್ಲಜನಕ ದಾಸ್ತಾನು ಇಲ್ಲದ ಕಾರಣ ಬೆಳಗಿನ ಜಾವ 04:30ರ ವೇಳೆಗೆ ಸಾವು ಸಂಭವಿಸಿದೆ. ಒಟ್ಟಾರೆಯಾಗಿ, ಇನ್ನೂ 32 ರೋಗಿಗಳು ಆಮ್ಲಜನಕದ ಕೊರತೆಯಿಂದಾಗಿ ಜೀವನ್ಮರಣ ಹೋರಾಟದಲ್ಲಿದ್ದಾರೆ.

ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಎಂ ಮಲ್ಲಿಕಾರ್ಜುನ್ ಖರ್ಗೆ ಅವರ ಪುತ್ರ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಕಟುವಾಗಿ ಪ್ರತಿಕ್ರಿಯಿಸಿ, "ಇದು ರಾಜ್ಯ ಸರ್ಕಾರವೇ ನಡೆಸಿರುವ ಹತ್ಯೆಯಲ್ಲದೆ ಮತ್ತೇನಲ್ಲ. ಉಪ ಆಯುಕ್ತರು ಒಂದೇ ಒಂದು ಸಭೆಯನ್ನು ಸಹ ಕರೆದು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಿಲ್ಲ. ಅವರು ಅದರಲ್ಲಿ  ಆಸಕ್ತಿ ಹೊಂದಿಲ್ಲ ಮತ್ತು ಎಚ್ಚರಿಕೆ ಮತ್ತು ಸಲಹೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಜಿಲ್ಲೆಗೆ ಸಂಬಂಧಿಸಿದ ಆಮ್ಲಜನಕದ ಸಿಲಿಂಡರ್‌ಗಳನ್ನು ನೆರೆಯ ಮಹಾರಾಷ್ಟ್ರದ ಆಸ್ಪತ್ರೆಗಳಿಗೆ ಕಳುಹಿಸಲಾಗಿದೆ" ಎಂದು ಆರೋಪಿಸಿದ್ದಾರೆ.

ಘಟನೆ ಸಂಬಂಧ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಕಲಬುರಗಿ ಡಿ.ಎಚ್.ಒ. ಅವರಿಂದ ಮಾಹಿತಿ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT