ಸುರೇಂದ್ರ ಶೆಟ್ಟಿ 
ರಾಜ್ಯ

ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ ವಿಧಿವಶ

ಅಲ್ಪ ಕಾಲದ ಅನಾರೋಗ್ಯದ ನಂತರ ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (57) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮಂಗಳೂರು: ಅಲ್ಪ ಕಾಲದ ಅನಾರೋಗ್ಯದ ನಂತರ ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (57) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕನ್ನಡಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿ ಮುಖ್ಯಸ್ಥರಾಗಿ ಕೆಲ ಕಾಲ ಸೇವೆ ಸಲ್ಲಿಸಿದ್ದ ಸುರೇಂದ್ರ ಶೆಟ್ಟಿ  ಮುಂಗಾರು, ಸಂಯುಕ್ತ ಕರ್ನಾಟಕ, ಕನ್ನಡಪ್ರಭ, ವಿಜಯಕರ್ನಾಟಕ, ವಾರ್ತಾ ಭಾರತಿ ಮತ್ತಿತರ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು.

ಬ್ರಹ್ಮಾವರದ ಆವರ್ಸೆ ಪಡುಮನೆಯಲ್ಲಿ ಜನಿಸಿದ ಸುರೇಂದ್ರ ಶೆಟ್ಟಿ ಮಂಗಳೂರು ವಿ.ವಿ. ಯ ಸಮೂಹ‌ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಮಂಗಳೂರು ವಿ.ವಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಹಳೆ ವಿದ್ಯಾರ್ಥಿಗಳ ಸಂಘ ಎಂಎಎಎಂ ಸ್ಥಾಪಕ ಗೌರವಾಧ್ಯಕ್ಷರಾಗಿದ್ದರು. ವಿಭಾಗದ ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷರಾಗಿದ್ದರು. ಎಂಎಎಎಂ ಸಂಘಟನೆ ಮಂಗಳೂರಿನ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರಿಗೆ ಏರ್ಪಡಿಸಿದ ಮನೋಭಿನಂದನ ಸಮಾರಂಭದಲ್ಲಿ ಹೊರ ತಂದ ಮನೋಭಿನಂದನ ಅಭಿನಂದನಾ ಗ್ರಂಥದ ಸಂಪಾದಕರಾಗಿದ್ದರು.

ಕಳೆದ ಎರಡು ವರ್ಷಗಳಿಂದ ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ದುಡಿಯುತ್ತಿದ್ದ ಸುರೇಂದ್ರ ಶೆಟ್ಟಿ ಪತ್ನಿ, ಪುತ್ರಿ, ಕುಟುಂಬಸ್ಥರನ್ನು ಅಗಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT