ಪ್ರಕಾಶ್ ರಾಥೋಡ್ 
ರಾಜ್ಯ

ಐಪಿಎಲ್ ಪಂದ್ಯಾವಳಿ ರದ್ದು: ಕಾಂಗ್ರೆಸ್ ಎಂಎಲ್ ಸಿ ಪ್ರಕಾಶ್ ರಾಥೋಡ್ ಸಂತಸ

ಐಪಿಎಲ್ ಪಂದ್ಯಾವಳಿಯನ್ನು ರದ್ಧು ಪಡಿಸಿರುವುದು ನ್ಯಾಯ ಸಮ್ಮತವಾಗಿದೆ ಎಂದು ಕಾಂಗ್ರೆಸ್ ಎಂಎಲ್ ಸಿ ಪ್ರಕಾಶ್ ರಾಥೋಡ್ ಸಂತಸ ವ್ಯಕ್ತ ಪಡಿಸಿದ್ದಾರೆ

ಬೆಂಗಳೂರು: ಐಪಿಎಲ್ ಪಂದ್ಯಾವಳಿಯನ್ನು ರದ್ಧು ಪಡಿಸಿರುವುದು ನ್ಯಾಯ ಸಮ್ಮತವಾಗಿದೆ ಎಂದು ಕಾಂಗ್ರೆಸ್ ಎಂಎಲ್ ಸಿ ಪ್ರಕಾಶ್ ರಾಥೋಡ್ ಸಂತಸ ವ್ಯಕ್ತ ಪಡಿಸಿದ್ದಾರೆ.

ಜಗತ್ತಿನಾದ್ಯಂತ ಕೊರೋನಾ ಸೋಂಕಿನ ರುದ್ರ ನರ್ತನ ನಡೆಯುತ್ತಿದೆ, ಪರಿಸ್ಥಿತಿ ಹೀಗಿರುವಾಗ ಐಪಿಎಲ್ ಪಂದ್ಯದ ಅವಶ್ಯಕತೆಯಿಲ್ಲ, ಐಪಿಎಲ್ ಪಂದ್ಯಾವಳಿಯನ್ನು ರದ್ದುಪಡಿಸುವಂತೆ ಕೋರಿ ಏಪ್ರಿಲ್ 27 ರಂದು ಪ್ರಕಾಶ್ ರಾಥೋಡ್ ಪತ್ರ ಬರೆದಿದ್ದರು.

ಆದರೆ ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರೋಧ ವ್ಯಕ್ತ ಪಡಿಸಿದ್ದರು. ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆ ಉಂಟಾಗುತ್ತದೆ ಎಂದು ಶಿವಕುಮಾರ್ ಹೇಳಿದ್ದರು. ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಕೂಡ ಏಪ್ರಿಲ್ 26 ರಿಂದ ಐಪಿಎಲ್ ಪಂದ್ಯ ಕುರಿತ ಯಾವುದೇ ಸುದ್ದಿಯನ್ನು ಪ್ರಕಟಿಸದಿರಲು ನಿರ್ಧರಿಸಿತ್ತು.

ಇಡೀ ಜಗತ್ತೆ ಕೊರೋನಾ ಸೋಂಕಿನಿಂದ ನಲುಗುತ್ತಿರುವಾಗ ಐಪಿಎಲ್ ಪಂದ್ಯದ ಅವಶ್ಯಕತೆಯಿದೆಯೇ? ಕ್ರಿಕೆಟ್ ಗಾಗಿ ಸ್ಟೇಡಿಯಂ ಬಿಡುವ ಬದಲು ಅದನ್ನು ಆಸ್ಪತ್ರೆಯಾಗಿ ಪರಿವರ್ತಿಸಿ ಕೋವಿಡ್ ಕೇರ್ ಸೆಂಟರ್ ಮಾಡಬಾರದೇಕೆ ಎಂದು ಪ್ರಕಾಶ್ ರಾಥೋಡ್ ಪ್ರಶ್ನಿಸಿದ್ದರು. ಆದರೆ ನಿನ್ನೆ ಬಿಸಿಸಿಐ ಐಪಿಎಲ್ ಪಂದ್ಯ ರದ್ದುಗೊಳಿಸಿದ್ದಕ್ಕೆ ಪ್ರಕಾಶ್ ರಾಥೋಡ್ ಸಂತಸ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT