ಸಾಂದರ್ಭಿಕ ಚಿತ್ರ 
ರಾಜ್ಯ

ಸಿಬ್ಬಂದಿ ಸಮಯಪ್ರಜ್ಞೆ: ಮೈಸೂರು ಕೆಆರ್ ಆಸ್ಪತ್ರೆಯಲ್ಲಿ ತಪ್ಪಿದ ಭಾರೀ ದುರಂತ

ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲಾಗಿರುವ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಕೃಷ್ಣರಾಜ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಸಂಭವಿಸಬಹುದಾದ ಭಾರೀ ದುರಂತ ತಪ್ಪಿದೆ.

ಮೈಸೂರು: ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲಾಗಿರುವ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಕೃಷ್ಣರಾಜ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಸಂಭವಿಸಬಹುದಾದ ಭಾರೀ ದುರಂತ ತಪ್ಪಿದೆ.

ಕೆಲ ತಾಂತ್ರಿಕ ತೊಂದರೆಯಿಂದಾಗಿ ಆಮ್ಲಜನಕ ಟ್ಯಾಂಕ್ ಹೆಪ್ಪುಗಟ್ಟಿದ್ದರಿಂದ ಕೊಳವೆಗಳಲ್ಲಿ ಪೂರೈಕೆ ಸ್ಥಗಿತಗೊಂಡಿತ್ತು. ಇದನ್ನು ಗಮನಿಸಿದ ಆಸ್ಪತ್ರೆಯ ಸಿಬ್ಬಂದಿ ತಕ್ಷಣವೇ ಉನ್ನತ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

ಅದರಂತೆ, ಅಗ್ನಿಶಾಮಕ ಮತ್ತು ತುರ್ತು ಸೇವಾ ವಿಭಾಗದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಕೊಳವೆಗಳು ಮತ್ತು ತೊಟ್ಟಿಯ ಮೇಲೆ ನೀರನ್ನು ಸಿಂಪಡಿಸಿ, ತಾಪಮಾನವನ್ನು ಸಾಮಾನ್ಯ ಸ್ಥಿತಿಗೆ ತಂದಿದ್ದಾರೆ.

ಇದು 6,000 ಕಿಲೋ ಲೀಟರ್ ಸಾಮರ್ಥ್ಯದ ದ್ರವೀಕೃತ ಆಮ್ಲಜನಕ ಘಟಕವಾಗಿದ್ದು, ಅನಿಲವನ್ನು -16 ರಿಂದ -18 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಆಸ್ಪತ್ರೆಯಲ್ಲಿ 800 ಕೋವಿಡ್ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT