ರಾಜ್ಯ

ಕವಿ, ಚಿಂತಕ ಜರಗನಹಳ್ಳಿ ಶಿವಶಂಕರ್ ಇನ್ನಿಲ್ಲ

Manjula VN

ಬೆಂಗಳೂರು: ಕನ್ನಡದ ಹಿರಿಯ ಕವಿ, ಚಿಂತಕ ಜರಗನಹಳ್ಳಿ ಶಿವಶಂಕರ್ ಇಂದು ಮೃತಪಟ್ಟಿದ್ದಾರೆ, ಅವರಿಗೆ 72 ವರ್ಷ ವಯಸ್ಸಾಗಿತ್ತು.

ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಸೆಪ್ಟೆಂಬರ್ 8, 1949ರಲ್ಲಿ ಬೆಂಗಳೂರಿನ ಜರಗನಹಳ್ಳಿಯಲ್ಲಿ ಜನಿಸಿದ್ದ ಅವರು ಬಿ.ಕಾಂ ಪಧವಿದರರಾಗಿ ನಂತರ ಬ್ಯಾಂಕಿನಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ನಂತರ ಸ್ವಯಂ ನಿವೃತ್ತಿ ಪಡೆದಿದ್ದರು. ಕನ್ನಡದ ಪ್ರಮುಖ ನಿಯತಕಾಲಿಕೆಗಳಲ್ಲಿ ಇವರ ಹನಿಗವಿತೆಗಳು, ನಿರಂತವಾಗಿ 40 ವರ್ಷಗಳ ಕಾಲ ಪ್ರಕಟಗೊಂಡಿವೆ. ಈವರೆಗೆ 50 ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ.

SCROLL FOR NEXT