ಸುಧಾಕರ್ 
ರಾಜ್ಯ

ಖಾಸಗಿ ಮೆಡಿಕಲ್ ಕಾಲೇಜುಗಳಿಂದ 6,034 ಹಾಸಿಗೆ ಮೀಸಲು, ಸದ್ಯದಲ್ಲೆ ಇನ್ನೂ 1,135 ಹಾಸಿಗೆ ಸಿಗಲಿದೆ

ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ 6,034 ಹಾಸಿಗೆಗಳನ್ನು ಕೋವಿಡ್ ಗೆ ಮೀಸಲಿಡಲಾಗಿದೆ. ಇನ್ನೂ 1,135 ಹಾಸಿಗೆಗಳು ಶೀಘ್ರದಲ್ಲೇ ದೊರೆಯಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಬೆಂಗಳೂರು: ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ 6,034 ಹಾಸಿಗೆಗಳನ್ನು ಕೋವಿಡ್ ಗೆ ಮೀಸಲಿಡಲಾಗಿದೆ. ಇನ್ನೂ 1,135 ಹಾಸಿಗೆಗಳು ಶೀಘ್ರದಲ್ಲೇ ದೊರೆಯಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಕೊರೊನಾ ನಿಯಂತ್ರಣ ಸಂಬಂಧ ಬೆಂಗಳೂರು ನಗರದ ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಸಭೆ ನಡೆಯಿತು. ನಂತರ ಮಾತನಾಡಿದ ಸಚಿವರು, ತಾಯಿ ಮತ್ತು ಮಗುವಿನ ಆಸ್ಪತ್ರೆ, ನಾನ್ ಕೋವಿಡ್ ತುರ್ತು ಆಸ್ಪತ್ರೆ ಹೊರತುಪಡಿಸಿ ಉಳಿದೆಡೆ ಶೇ.75 ರಷ್ಟು ಹಾಸಿಗೆಗಳನ್ನು ಕೋವಿಡ್ ಗೆ ಪಡೆಯಲಾಗಿದೆ. ಶೇ.50 ರಷ್ಟು ಹಾಸಿಗೆಗಳನ್ನು ಹಿಂದೆಯೇ ಪಡೆಯಲಾಗಿದೆ. ಎಲ್ಲ ಸೇರಿ ಒಟ್ಟು 6,034 ಹಾಸಿಗೆಗಳು ಸರ್ಕಾರಕ್ಕೆ ಸಿಕ್ಕಿದೆ. ಇನ್ನು 1,135 ಹಾಸಿಗೆಗಳು ದೊರೆಯಲಿವೆ ಎಂದರು.

ರಾಜ್ಯ ಸರ್ಕಾರ ಕೇಂದ್ರ ಆರೋಗ್ಯ ಸಚಿವಾಲಯದೊಂದಿಗೆ ಸಂಪರ್ಕದಲ್ಲಿದ್ದು, ಲಸಿಕೆ ಪಡೆಯುತ್ತಿದೆ. ಈಗ ಸುಮಾರು 5 ಲಕ್ಷ ಡೋಸ್ ಲಸಿಕೆ ದಾಸ್ತಾನು ಇದೆ. 1 ಕೋಟಿ ಡೋಸ್ ಲಸಿಕೆಯನ್ನು ಈಗಾಗಲೇ ನೀಡಲಾಗಿದೆ. 18-44 ವರ್ಷದವರಿಗೆ ನೀಡಲು ಎರಡು ಕೋಟಿಯಷ್ಟು ಲಸಿಕೆ ಆರ್ಡರ್ ಮಾಡಲಾಗಿದೆ. ಮೇ 15 ರ ವೇಳೆಗೆ ಕಂಪನಿಗಳಿಂದ ನೇರವಾಗಿ ಲಸಿಕೆ ರವಾನೆಯಾಗಲಿದೆ. ಲಸಿಕೆ ನೀಡಲು ಸರ್ಕಾರ ಬದ್ಧ ಎಂದರು.

ಅಂತಿಮ ವರ್ಷದ ಎಂಬಿಬಿಎಸ್, ನರ್ಸಿಂಗ್ ವಿದ್ಯಾರ್ಥಿಗಳಿಗೆ ವಿಶೇಷ ಭತ್ಯೆ ನೀಡುವುದು, ಇಂಟರ್ನಲ್ ನಲ್ಲಿ ಅಂಕ ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ವಿದ್ಯಾರ್ಥಿಗಳನ್ನು ಕೊರೊನಾ ಸೇನಾನಿಗಳೆಂದು ಪರಿಗಣಿಸಿ ಆದ್ಯತೆ ಮೇಲೆ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಜೊತೆಗೆ ಇಡೀ ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುವ ಎಲ್ಲರಿಗೂ ರಿಸ್ಕ್ ಭತ್ಯೆ ನೀಡಲು ನಿರ್ಧರಿಸಲಾಗಿದೆ. ಆಸ್ಪತ್ರೆಗಳಲ್ಲಿ ಮರಣ ಪ್ರಮಾಣ ಕಡಿಮೆ ಮಾಡಲು ಉತ್ತಮ ಚಿಕಿತ್ಸೆ ನೀಡಬೇಕು, ಡೆತ್ ಆಡಿಟ್ ಮಾಡಬೇಕು, ಟೆಲಿ ಐಸಿಯು ಸೇವೆಯೂ ನೀಡಬೇಕು ಎಂದು ಸೂಚಿಸಲಾಗಿದೆ. ಕಂದಾಯ ಸಚಿವ ಆರ್.ಅಶೋಕ್, ಗೃಹಸಚಿವ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT