ಸಾಂದರ್ಭಿಕ ಚಿತ್ರ 
ರಾಜ್ಯ

ಕಾಳಸಂತೆಯಲ್ಲಿ ರೆಮಿಡಿಸಿವಿರ್ ಮಾರಾಟ: 90 ಮಂದಿ ಬಂಧನ

ರೆಮಿಡಿಸಿವಿರ್ ಔಷಧವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಸುಮಾರು 90 ಮಂದಿಯನ್ನು ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸ್‍ ಮಹಾ ನಿರ್ದೇಶಕ ಪ್ರವೀಣ್‍ ಸೂದ್ ಅವರು ಗುರುವಾರ ತಿಳಿಸಿದ್ದಾರೆ.

ಬೆಂಗಳೂರು: ರೆಮಿಡಿಸಿವಿರ್ ಔಷಧವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಸುಮಾರು 90 ಮಂದಿಯನ್ನು ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸ್‍ ಮಹಾ ನಿರ್ದೇಶಕ ಪ್ರವೀಣ್‍ ಸೂದ್ ಅವರು ಗುರುವಾರ ತಿಳಿಸಿದ್ದಾರೆ.

ವೈರಾಣು ನಿಗ್ರಹ ರೆಮಿಡಿಸಿವಿರ್ ಔಷಧವನ್ನು ಕೋವಿಡ್‍-19 ಚಿಕಿತ್ಸೆಗೆ ಬಳಸಲಾಗುತ್ತಿದೆ.

ಕಾಳಸಂತೆಯಲ್ಲಿ ರೆಮಿಡಿಸಿವಿರ್ ಮಾರಾಟ ಮಾಡುತ್ತಿದ್ದ 90 ಜನರನ್ನು ಬಂಧಿಸಲಾಗಿದ್ದು, ನಕಲಿ ರೆಮಿಡಿಸಿವಿರ್ ಔಷಧವನ್ನು ಪ್ಯಾಕಿಂಗ್ ಮಾಡುತ್ತಿದ್ದ 38 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪ್ರವೀಣ್‍ ಸೂದ್ ಟ್ವೀಟ್ ಮಾಡಿದ್ದಾರೆ.

ಬಿಕ್ಕಟ್ಟಿನ ಪರಿಸ್ಥಿತಿಯ ಲಾಭವನ್ನು ಪಡೆದು ಕಾನೂನು ಬಾಹಿರವಾಗಿ ಹಣಗಳಿಸುವವರನ್ನು ಸೆರೆ ಹಿಡಿಯಲು ನಡೆಸಿದ ಕಾರ್ಯಾಚರಣೆ ಭಾಗವಾಗಿ ಇವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ತೀವ್ರ ಏರಿಕೆ ಹಿನ್ನೆಲೆಯಲ್ಲಿ ರೆಮಿಡಿಸಿವಿರ್ ಔಷಧಕ್ಕೆ ಹೆಚ್ಚು ಬೇಡಿಕೆ ಇದೆ. ರೆಮಿಡಿಸಿವಿರ್ ಔಷಧವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.‍ಯಡಿಯೂರಪ್ಪ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT