ರಾಜ್ಯ

ಕಾಳಸಂತೆಯಲ್ಲಿ ರೆಮಿಡಿಸಿವಿರ್ ಮಾರಾಟ: 90 ಮಂದಿ ಬಂಧನ

Lingaraj Badiger

ಬೆಂಗಳೂರು: ರೆಮಿಡಿಸಿವಿರ್ ಔಷಧವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಸುಮಾರು 90 ಮಂದಿಯನ್ನು ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸ್‍ ಮಹಾ ನಿರ್ದೇಶಕ ಪ್ರವೀಣ್‍ ಸೂದ್ ಅವರು ಗುರುವಾರ ತಿಳಿಸಿದ್ದಾರೆ.

ವೈರಾಣು ನಿಗ್ರಹ ರೆಮಿಡಿಸಿವಿರ್ ಔಷಧವನ್ನು ಕೋವಿಡ್‍-19 ಚಿಕಿತ್ಸೆಗೆ ಬಳಸಲಾಗುತ್ತಿದೆ.

ಕಾಳಸಂತೆಯಲ್ಲಿ ರೆಮಿಡಿಸಿವಿರ್ ಮಾರಾಟ ಮಾಡುತ್ತಿದ್ದ 90 ಜನರನ್ನು ಬಂಧಿಸಲಾಗಿದ್ದು, ನಕಲಿ ರೆಮಿಡಿಸಿವಿರ್ ಔಷಧವನ್ನು ಪ್ಯಾಕಿಂಗ್ ಮಾಡುತ್ತಿದ್ದ 38 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪ್ರವೀಣ್‍ ಸೂದ್ ಟ್ವೀಟ್ ಮಾಡಿದ್ದಾರೆ.

ಬಿಕ್ಕಟ್ಟಿನ ಪರಿಸ್ಥಿತಿಯ ಲಾಭವನ್ನು ಪಡೆದು ಕಾನೂನು ಬಾಹಿರವಾಗಿ ಹಣಗಳಿಸುವವರನ್ನು ಸೆರೆ ಹಿಡಿಯಲು ನಡೆಸಿದ ಕಾರ್ಯಾಚರಣೆ ಭಾಗವಾಗಿ ಇವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ತೀವ್ರ ಏರಿಕೆ ಹಿನ್ನೆಲೆಯಲ್ಲಿ ರೆಮಿಡಿಸಿವಿರ್ ಔಷಧಕ್ಕೆ ಹೆಚ್ಚು ಬೇಡಿಕೆ ಇದೆ. ರೆಮಿಡಿಸಿವಿರ್ ಔಷಧವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.‍ಯಡಿಯೂರಪ್ಪ ಹೇಳಿದ್ದಾರೆ.

SCROLL FOR NEXT