ವಿಐಎಸ್ ಎಲ್ ಆಕ್ಸಿಜನ್ ಪ್ಲಾಂಟ್ ನಲ್ಲಿ ಸಚಿವರಾದ ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ ಮತ್ತಿರರು 
ರಾಜ್ಯ

ವಿಐಎಸ್ ಎಲ್ ನಲ್ಲಿ ಆಕ್ಸಿಜನ್ ಉತ್ಪಾದನೆ ಹೆಚ್ಚಿಸಲು ನೆರವು- ಸಚಿವ ಜಗದೀಶ್ ಶೆಟ್ಟರ್ 

ಭದ್ರಾವತಿಯಲ್ಲಿರುವ ವಿಐಎಸ್ಎಲ್ ಆಕ್ಸಿಜನ್ ಪ್ಲಾಂಟ್ ನಲ್ಲಿ ಆಕ್ಸಿಜನ್ ಉತ್ಪಾದನೆ ಪುನಾರಂಭಿಸಲಾಗಿದ್ದು, ಇದನ್ನು ಹೆಚ್ಚಿಸಲು ರಾಜ್ಯ ಸರಕಾರದ  ವತಿಯಿಂದ ಅಗತ್ಯವಿರುವ ಎಲ್ಲಾ ನೆರವು ನೀಡುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.

ಶಿವಮೊಗ್ಗ: ಭದ್ರಾವತಿಯಲ್ಲಿರುವ ವಿಐಎಸ್ಎಲ್ ಆಕ್ಸಿಜನ್ ಪ್ಲಾಂಟ್ ನಲ್ಲಿ ಆಕ್ಸಿಜನ್ ಉತ್ಪಾದನೆ ಪುನಾರಂಭಿಸಲಾಗಿದ್ದು, ಇದನ್ನು ಹೆಚ್ಚಿಸಲು ರಾಜ್ಯ ಸರಕಾರದ  ವತಿಯಿಂದ ಅಗತ್ಯವಿರುವ ಎಲ್ಲಾ ನೆರವು ನೀಡುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.

ಅವರಿಂದು ವಿಐಎಸ್ಎಲ್ ಗೆ ಭೇಟಿ ನೀಡಿ ಆಕ್ಸಿಜನ್ ಉತ್ಪಾದನಾ ಘಟಕ, ಬಾಟ್ಲಿಂಗ್ ಪ್ಲಾಂಟ್ ವೀಕ್ಷಣೆ ಮಾಡಿದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ಪ್ರತಿದಿನ 150 ಸಿಲಿಂಡರ್ ಅಕ್ಸಿಜನ್ ಉತ್ಪಾದನೆ ಆರಂಭಿಸಲಾಗಿದೆ. ಹೊಸ ಕಂಪ್ರೆಸ್ಸರ್ ಅಳವಡಿಸಿದರೆ ಉತ್ಪಾದನೆಯನ್ನು  400 ರಿಂದ 500 ಸಿಲಿಂಡರ್ ಗಳಿಗೆ ಹೆಚ್ಚಿಸಬಹುದೆಂದ ಅಧಿಕಾರಿಗಳು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಹೊಸ ಕಂಪ್ರೆಸ್ಸರ್ ಖರೀದಿ ಸೇರದಿಂತೆ ಸರಕಾರದಿಂದ  ಅಗತ್ಯವಿರುವ ನೆರವನ್ನು ನೀಡಲಾಗುವುದು ಎಂದು ಹೇಳಿದರು. 

ರಾಜ್ಯದಲ್ಲಿನ ಆಕ್ಸಿಜನ್ ಬೇಡಿಕೆಯನ್ನು ಈಡೇರಿಸಲು ಸರಕಾರದಿಂದ ಪ್ರಾಮಾಣೀಕ ಪ್ರಯತ್ನ ನಡೆಸಲಾಗುತ್ತಿದೆ. ಬಳ್ಳಾರಿ ಜಿಂದಾಲ್ ಕಂಫನಿಯಲ್ಲಿ ದ್ರವೀಕೃತ ಆಮ್ಲಜನಕ ಉತ್ಪಾದನೆಯನ್ನು 1000 ಎಂ.ಟಿ ಗಳಿಗೆ ಹೆಚ್ಚಿಸುವಂತೆ ಮನವಿ ಮಾಡಲಾಗಿದೆ. ಅಲ್ಲದೆ, ರಾಜ್ಯದ ಇತರೆ ಭಾಗಗಳಲ್ಲಿ ಸ್ಥಗಿತಗೊಂಡಿದ್ದ ಆಮ್ಲಜನಕ ಘಟಕಗಳನ್ನು ಪುನಃ ಅರಂಭಿಸಲು ಅಗತ್ಯ ನೆರವನ್ನು ನೀಡಲಾಗುವುದು. ಎಲ್ಲಿ ಈ ಘಟಕಗಳನ್ನು ಪುನಃ ಪ್ರಾರಂಭಿಸಬಹುದೋ ಅಂತಹ  ಘಟಕಗಳ ಬಗ್ಗೆ ಮಾಹಿತಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ದಿ ಹಾಗೂ ಶಿವಮೊಗ್ಗ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ರಾಜ್ಯದಲ್ಲಿ ಆಮ್ಲಜನಕ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಉತ್ಪಾದನೆ ನಿಲ್ಲಿಸಿರುವ ಘಟಕಗಳನ್ನು ಪುನಃ ಪ್ರಾರಂಭಿಸಲು ಅಗತ್ಯವಿರುವ ಎಲ್ಲಾ ಸಹಕಾರವನ್ನು ನೀಡುವ ಭರವಸೆಯನ್ನು ನೀಡಿದರು.ನಂತರ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಆಮ್ಲಜನಕದ ಸ್ಥಿತಿ ಗತಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT