ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಮಗಳೂರು: ಕಾಡಾನೆ ತಿವಿದು ಅರಣ್ಯ ರಕ್ಷಕ ಸಾವು

ಆನೆಯನ್ನು ಕಾಡಿಗೆ ಅಟ್ಟಲು ತೆರಳಿದಾಗ ಕಾಡಾನೆ ತಿವಿದು ಅರಣ್ಯ ರಕ್ಷಕನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಆಲ್ದೂರು ಸಮೀಪ ಮಡೆನೆರಳು ಬಳಿ ಶುಕ್ರವಾರ ನಡೆದಿದೆ.

ಚಿಕ್ಕಮಗಳೂರು: ಆನೆಯನ್ನು ಕಾಡಿಗೆ ಅಟ್ಟಲು ತೆರಳಿದಾಗ ಕಾಡಾನೆ ತಿವಿದು ಅರಣ್ಯ ರಕ್ಷಕನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಆಲ್ದೂರು ಸಮೀಪ ಮಡೆನೆರಳು ಬಳಿ ಶುಕ್ರವಾರ ನಡೆದಿದೆ.

ಮೃತಪಟ್ಟ ಅರಣ್ಯ ರಕ್ಷಕ ಪುಟ್ಟರಾಜು(38) ಎಂದು ಗುರುತಿಸಲಾಗಿದ್ದು, ಇಂದು ಬೆಳಗ್ಗೆ 11.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ.

ಆನೆ ತಿವಿದ ತೀವ್ರತೆಗೆ ಗಾಯಗೊಂಡಿದ್ದ ಪುಟ್ಟರಾಜು ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ ಮಾರ್ಗಮಧ್ಯೆದಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮುದ್ದಣ್ಣ ಪ್ರತಿಕ್ರಿಯಿಸಿ, ಆನೆಯನ್ನು ಕಾಡಿಗೆ ಅಟ್ಟಲು ಅರಣ್ಯ ಸಿಬ್ಬಂದಿ ತಂಡ ತೆರಳಿದ್ದು, ಈ ಕಾರ್ಯದಲ್ಲಿ ಪುಟ್ಟರಾಜು ಕೂಡ ಇದ್ದರು. ಕಾರ್ಯಾಚಣೆ ವೇಳೆ ಆನೆ ಅವರ ಮೇಲೆ ದಾಳಿ ಮಾಡಿದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT