ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಮಗಳೂರು: ಕಾಡಾನೆ ತಿವಿದು ಅರಣ್ಯ ರಕ್ಷಕ ಸಾವು

ಆನೆಯನ್ನು ಕಾಡಿಗೆ ಅಟ್ಟಲು ತೆರಳಿದಾಗ ಕಾಡಾನೆ ತಿವಿದು ಅರಣ್ಯ ರಕ್ಷಕನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಆಲ್ದೂರು ಸಮೀಪ ಮಡೆನೆರಳು ಬಳಿ ಶುಕ್ರವಾರ ನಡೆದಿದೆ.

ಚಿಕ್ಕಮಗಳೂರು: ಆನೆಯನ್ನು ಕಾಡಿಗೆ ಅಟ್ಟಲು ತೆರಳಿದಾಗ ಕಾಡಾನೆ ತಿವಿದು ಅರಣ್ಯ ರಕ್ಷಕನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಆಲ್ದೂರು ಸಮೀಪ ಮಡೆನೆರಳು ಬಳಿ ಶುಕ್ರವಾರ ನಡೆದಿದೆ.

ಮೃತಪಟ್ಟ ಅರಣ್ಯ ರಕ್ಷಕ ಪುಟ್ಟರಾಜು(38) ಎಂದು ಗುರುತಿಸಲಾಗಿದ್ದು, ಇಂದು ಬೆಳಗ್ಗೆ 11.30ರ ಸುಮಾರಿಗೆ ಈ ಅವಘಡ ಸಂಭವಿಸಿದೆ.

ಆನೆ ತಿವಿದ ತೀವ್ರತೆಗೆ ಗಾಯಗೊಂಡಿದ್ದ ಪುಟ್ಟರಾಜು ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ ಮಾರ್ಗಮಧ್ಯೆದಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮುದ್ದಣ್ಣ ಪ್ರತಿಕ್ರಿಯಿಸಿ, ಆನೆಯನ್ನು ಕಾಡಿಗೆ ಅಟ್ಟಲು ಅರಣ್ಯ ಸಿಬ್ಬಂದಿ ತಂಡ ತೆರಳಿದ್ದು, ಈ ಕಾರ್ಯದಲ್ಲಿ ಪುಟ್ಟರಾಜು ಕೂಡ ಇದ್ದರು. ಕಾರ್ಯಾಚಣೆ ವೇಳೆ ಆನೆ ಅವರ ಮೇಲೆ ದಾಳಿ ಮಾಡಿದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT