ಸಂಗ್ರಹ ಚಿತ್ರ 
ರಾಜ್ಯ

ಈ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಕೊರೋನಾ ಪರೀಕ್ಷಾ ವರದಿ ಅಗತ್ಯವಿಲ್ಲ!

ಮಹಾರಾಷ್ಟ್ರ, ಕೇರಳ, ಪಂಜಾಬ್, ಚಂಡೀಗಢದಿಂದ ವಿಮಾನದ ಮೂಲಕ ರಾಜ್ಯಕ್ಕೆ ಆಗಮಿಸುವ ರೋಗ ಲಕ್ಷಣವುಳ್ಳ ಪ್ರಯಾಣಿಕರು ಮಾತ್ರ ಆರ್'ಟಿ-ಪಿಸಿಆರ್ ನೆಗೆಟಿವ್ ನರದಿ ತರಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. 

ಬೆಂಗಳೂರು: ಮಹಾರಾಷ್ಟ್ರ, ಕೇರಳ, ಪಂಜಾಬ್, ಚಂಡೀಗಢದಿಂದ ವಿಮಾನದ ಮೂಲಕ ರಾಜ್ಯಕ್ಕೆ ಆಗಮಿಸುವ ರೋಗ ಲಕ್ಷಣವುಳ್ಳ ಪ್ರಯಾಣಿಕರು ಮಾತ್ರ ಆರ್'ಟಿ-ಪಿಸಿಆರ್ ನೆಗೆಟಿವ್ ನರದಿ ತರಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. 

ಈ ಹಿಂದೆ ಈ ನಾಲ್ಕು ರಾಜ್ಯಗಳಿಂದ ಆಗಮಿಸುವವರು ರಾಜ್ಯಕ್ಕೆ ಆಗಮಿಸುವಾಗ 72 ಗಂಟೆಗಿಂತ ಹಳೆಯದಲ್ಲದ ಕೊರೋನಾ ನೆಗೆಟಿವ್ ವರದಿ ತರುವುದನ್ನು ಕಡ್ಡಾಯ ಮಾಡಲಾಗಿತ್ತು. ಈ ನಿಯಮವನ್ನು ಸಡಿಲಿಸುತ್ತಿದ್ದು, ಪ್ರತಿಯೊಬ್ಬರೂ ಆರ್'ಟಿಪಿಸಿಆರ್ ನೆಗೆಟಿವ್ ವರದಿ ತರುವ ಅಗತ್ಯವಿಲ್ಲ. 

ಆದರೆ, ರೋಗ ಲಕ್ಷಣಗಳುಳ್ಳವರು ಮಾತ್ರ ನೆಗೆಟಿವ್ ವರದಿ ತರಬೇಕು. ವಿಮಾನ ನಿಲ್ದಾಣದ ಸಿಬ್ಬಂದಿ ಇದನ್ನು ಪರಿಶೀಲನೆ ನಡೆಸಬೇಕು. ಈ ಮೂಲಕ ರೋಗ ಹರಡದಂತೆ ತಡೆಯಲು ಕ್ರಮ ಕೈಗೊಳ್ಳಲು ಯೋಜನೆ ರೂಪಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT