ರಾಜ್ಯ

ಜೆಡಿಎಸ್ ಮುಖಂಡ ಆರ್. ರತನ್ ಸಿಂಗ್ ನಿಧನ: ಎಚ್.ಡಿ. ಕುಮಾರಸ್ವಾಮಿ ಸಂತಾಪ

Raghavendra Adiga

ಬೆಂಗಳೂರು: ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ಮಾಜಿ ಅಧ್ಯಕ್ಷ  ಆರ್. ರತನ್ ಸಿಂಗ್ ಶನಿವಾರ ಮುಂಜಾನೆ ನಿಧನರಾಗಿದ್ದಾರೆ.

ಜೆಡಿಎಸ್ ಹಿರಿಯ ನಾಯಕನ ನಿಧನಕ್ಕೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ, ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.

"ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ಮಾಜಿ ಅಧ್ಯಕ್ಷರು, ಕರ್ನಾಟಕ ಪ್ರದೇಶ ಜನತಾದಳ ಜಾತ್ಯತೀತ ಪಕ್ಷದ ಹಿರಿಯ ಉಪಾಧ್ಯಕ್ಷ ರಾಗಿದ್ದ ಸ್ನೇಹಜೀವಿ, ಹಸನ್ಮುಖಿ ಶ್ರೀಯುತ ಆರ್. ರತನ್ ಸಿಂಗ್ ರವರು ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಗಿದೆ.

"ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲೆಂದು ಮತ್ತು ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ಭಗವಂತನು ನೀಡಲೆಂದು ಪ್ರಾರ್ಥಿಸುತ್ತೇನೆ" ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಹೇಳಿದ್ದಾರೆ.

ಅಲ್ಲದೆ ಪಕ್ಷದ ಮುಖಂಡ ಗ್ರಾಮ ಪಂಚಾಯಿತಿ ಸದಸ್ಯ ಅಡವಿಶ್ ಅವರ ನಿಧನಕ್ಕೆ ಕೂಡ ಕುಮಾರಸ್ವಾಮಿ ಇದೇ ಸಮಯದಲ್ಲಿ ಶೋಕ ವ್ಯಕ್ತಪಡಿಸಿದ್ದಾರೆ.

SCROLL FOR NEXT