ರಾಜ್ಯ

ಬೆಂಗಳೂರಿನ ಆಸ್ಪತ್ರೆಗಳಲ್ಲಿ ಬೆಡ್ ಗಳ ಸಮರ್ಥ ಹಂಚಿಕೆಗೆ ಕ್ರಮ: ಮುಖ್ಯ ನೋಡಲ್ ಅಧಿಕಾರಿಯಾಗಿ ತುಶಾರ್ ಗಿರಿನಾಥ್ ನೇಮಕ 

Sumana Upadhyaya

ಬೆಂಗಳೂರು: ನಗರದಲ್ಲಿ ಬೆಡ್ ಬ್ಲಾಕಿಂಗ್ ದಂಧೆ ಬಯಲಿಗೆ ಬಂದ ನಂತರ ಭಾರೀ ಸದ್ದು ಮಾಡುತ್ತಿದೆ. ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಂತೆ ಜನರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಮಸ್ಯೆ, ರೆಮೆಡಿಸಿವಿರ್ ಔಷಧ, ಆಮ್ಲಜನಕ ವ್ಯತ್ಯಯ, ವೆಂಟಿಲೇಟರ್ ಸಮಸ್ಯೆ ಹೀಗೆ ಸಾಕಷ್ಟು ವೈದ್ಯಕೀಯ ಮೂಲಭೂತ ಸೌಕರ್ಯಗಳ ಸಮಸ್ಯೆ ಉಂಟಾಗುತ್ತಿದೆ.

ಈ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೂಲಕ ಜನರಿಗೆ ಆಸ್ಪತ್ರೆಗಳಲ್ಲಿ ಬೆಡ್ ಹಂಚಿಕೆ ಮಾಡುವ ವ್ಯವಸ್ಥೆ ಪಾರದರ್ಶಕವಾಗಿ ದಕ್ಷತೆಯಿಂದ ಸಾಗಲು ಹಲವು ವ್ಯವಸ್ಥೆಗಳನ್ನು ಸಂಯೋಜಿಸಲು ರಾಜ್ಯ ಕಾರ್ಯಕಾರಿ ಸಮಿತಿ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಶಾರ್ ಗಿರಿನಾಥ್ ಅವರನ್ನು ಮುಖ್ಯ ನೋಡಲ್ ಅಧಿಕಾರಿಯಾಗಿ ನೇಮಿಸಿದೆ.

SCROLL FOR NEXT