ಸಚಿವ ಎಸ್. ಟಿ. ಸೋಮಶೇಖರ್ ಮತ್ತಿತರರು 
ರಾಜ್ಯ

ಸ್ವಕ್ಷೇತ್ರದಲ್ಲಿ ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ ತಲಾ 1 ಲಕ್ಷ ರೂ.ಪರಿಹಾರ ನೀಡಿದ ಸಚಿವ ಎಸ್.ಟಿ.ಸೋಮಶೇಖರ್!

ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಎಸ್.ಟಿ.ಸೋಮಶೇಖರ್ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ ತಲಾ 1 ಲಕ್ಷ ರೂ.ಪರಿಹಾರ ಧನವನ್ನು ವೈಯಕ್ತಿಕವಾಗಿ ಭರಿಸುತ್ತಿದ್ದಾರೆ.

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಎಸ್.ಟಿ.ಸೋಮಶೇಖರ್ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ  ಕೋವಿಡ್-19 ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ ತಲಾ 1 ಲಕ್ಷ ರೂ.ಪರಿಹಾರ ಧನವನ್ನು ವೈಯಕ್ತಿಕವಾಗಿ ಭರಿಸುತ್ತಿದ್ದಾರೆ.

ರಾಮುಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಮಹಾಮಾರಿ ಕೊರೋನಾ ಸೋಂಕಿನಿಂದ ಮೃತಪಟ್ಟ 9 ಮೃತರ ಕುಟುಂಬಗಳು ಹಾಗೂ ಚುಂಚನಕುಪ್ಪೆ ಗ್ರಾಮ ಪಂಚಾಯಿತಿಯ 2 ಕುಟುಂಬಗಳಿಗೆ ವೈಯಕ್ತಿಕವಾಗಿ ತಲಾ 1 ಲಕ್ಷ ಪರಿಹಾರ ಧನವನ್ನು ಇಂದು ವಿತರಿಸಿದರು.

ಕೋವಿಡ್-19 ನಿಂದ ಮೃತಪಟ್ಟ ಕುಟುಂಬಗಳಿಗೆ ತಲಾ ಒಂದು ಲಕ್ಷ ಪರಿಹಾರ ಸಹಾಯ ಧನ ವಿತರಣಾ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ  ಕ್ಷೇತ್ರದ  ನಿರ್ಮಲಾನಂದನಾಥ ಸ್ವಾಮೀಜಿ ನಿನ್ನೆ ಚಾಲನೆ ನೀಡಿದ್ದರು.

ಜನತೆಯ ಸೇವಕನಾಗಿ ಅವರ ಅವಶ್ಯಕತೆಗಳನ್ನು ಪೂರೈಸುವುದು ನನ್ನ ಕರ್ತವ್ಯ.ಹೀಗಾಗಿ ನನ್ನ ಕ್ಷೇತ್ರದಲ್ಲಿ ಕೋವಿಡ್‍ನಿಂದ ಮೃತಪಟ್ಟ ಕುಟುಂಬದವರಿಗೆ ತಲಾ 1 ಲಕ್ಷ ರೂಪಾಯಿ  ಪರಿಹಾರ ಸಹಾಯಧನವನ್ನು ವೈಯುಕ್ತಿಕವಾಗಿ ನೀಡುವ ವ್ಯವಸ್ಥೆ ಮಾಡಿದ್ದು, ಆಸ್ಪತ್ರೆಗೆ ದಾಖಲಾದವರಿಗೂ 25, 50 ಸಾವಿರ ಸಹಾಯ ಧನ ನೀಡುವುದಾಗಿಯೂ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT