ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್ ವಾರ್‌ ರೂಮ್‌: ಉಗ್ರರಂತೆ ಬಿಂಬಿಸಿದ್ದ 16 ಮಂದಿ ಮುಸ್ಲಿಂ ನೌಕರರ ಮರುನೇಮಕ

ಸಂಸದ ತೇಜಸ್ವಿ ಸೂರ್ಯ ಮತ್ತು ಮೂವರು ಶಾಸಕರು ಮೇ 4ರಂದು ಕೋವಿಡ್ ವಾರ್‌ ರೂಮ್‌ ಮೇಲೆ ದಾಳಿ ನಡೆಸಿದ ನಂತರ ಅಮಾನತುಗೊಂಡಿದ್ದ 16 ಮುಸ್ಲಿಂ ನೌಕರರು ಸೋಮವಾರದಿಂದ (ಮೇ 10) ಮತ್ತೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆಂದಜು ಹೇಳಲಾಗುತ್ತಿದೆ. 

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಮತ್ತು ಮೂವರು ಶಾಸಕರು ಮೇ 4ರಂದು ಕೋವಿಡ್ ವಾರ್‌ ರೂಮ್‌ ಮೇಲೆ ದಾಳಿ ನಡೆಸಿದ ನಂತರ ಅಮಾನತುಗೊಂಡಿದ್ದ 16 ಮುಸ್ಲಿಂ ನೌಕರರು ಸೋಮವಾರದಿಂದ ಮತ್ತೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆಂದು ಹೇಳಲಾಗುತ್ತಿದೆ. 

ಬಿಬಿಎಂಪಿಯಲ್ಲಿ ಹಾಸಿಗೆ ಬ್ಲಾಕಿಂಗ್‌ ನಡೆಯುತ್ತಿದೆ ಎಂದು ಆರೋಪಿಸಿದ್ದ ಸಂಸದ ಮತ್ತು ಶಾಸಕರು ಈ ನೌಕರರ ವಿರುದ್ಧ ಹರಿಹಾಯ್ದಿದ್ದರು. ಈ ಹಗರಣಕ್ಕೆ ಕೋಮು ಸ್ವರೂಪ ನೀಡಿದ್ದರು. 

ಬಿಬಿಎಂಪಿ ದಕ್ಷಿಣ ವಲಯದಲ್ಲಿರುವ ವಾರ್ ರೂಮ್'ಗೆ ಬರುವಂತೆ ಸೂಚಿಸಲಾಗಿತ್ತು. ಶನಿವಾರ ರಾತ್ರಿ ಪತ್ರವೊಂದಕ್ಕೆ ಸಹಿ ಮಾಡುವಂತೆ ತಿಳಿಸಿದ್ದರು. ಪತ್ರದಲ್ಲಿ ಏನಿದೆ ಎಂಬುದನ್ನು ಓದಲೂ ನಮಗೆ ಅವಕಾಶ ನೀಡಲಿಲ್ಲ. ಬಳಿಕ ಪತ್ರದಲ್ಲಿರುವ ಅಂಶವನ್ನು ಗಟ್ಟಿಯಾಗಿ ಓದಿದದರು. ಘಟನೆಯಿಂದ ನಮಗೆ ಸಾಕಷ್ಟು ನೋವಾಗಿದೆ. ನಮ್ಮನ್ನು ಉಗ್ರರಂತೆ ಬಿಂಬಿಸಲಾಗಿದೆ. ಆದರೂ ಪ್ರಸ್ತುತದ ಪರಿಸ್ಥಿತಿ ಆರ್ಥಿಕ ಸಂಕಷ್ಟವನ್ನು ಎದುರು ಮಾಡಿದ್ದು, ನಾನು ಮರಳಿ ಕೆಲಸಕ್ಕೆ ಸೇರ್ಪಡೆಗೊಳ್ಳುತ್ತಿದ್ದೇವೆಂದು ನೌಕರರೊಬ್ಬರು ಹೇಳಿದ್ದಾರೆ. 

ಪತ್ರಕ್ಕೆ ಸಹಿ ಮಾಡಿದ ಬಳಿಕ ಸಂಸ್ಥೆಯೊಂದು ನಮ್ಮೊಂದಿಗೆ ಗುತ್ತಿಗೆ ಮಾಡಿಕೊಂಡಿದ್ದು, ಬಿಬಿಎಂಪಿ ಅಧಿಕಾರಿಗಳು ನಮ್ಮನ್ನು ಸಂಪರ್ಕಿಸಿ ಹೊಸ ಕೆಲಸದ ಕುರಿತು ಮಾಹಿತಿ ನೀಡಲಿದ್ದಾರೆಂದು ಹೇಳಿದರು. ಆದರೆ, ಈ ವರೆಗೂ ಯಾವುದೇ ಬೆಳವಣಿಗೆಗಳು ಕಂಡು ಬಂದಿಲ್ಲ. ಬೇರೆ ಸ್ಥಳಕ್ಕೆ ನಮ್ಮನ್ನು ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ ಎಂದು ಹೇಳಿದ್ದಾರೆ. ನನ್ನ ಕೆಲಸದ ಸಮಯ ಬೆಳಿಗ್ಗೆ 8 ಸಂಜೆ 4 ಗಂಟೆಯವರೆಗೆ ಇತ್ತು. ಇದೇ ಸಮಯಕ್ಕೆ ಹೋಗುತ್ತೇನೆ. ಕೆಲಸ ಇದ್ದರೆ ಮಾಡುತ್ತೇನೆ. ಹಣಕ್ಕಾಗಿ ಅಲ್ಲದೇ ಇದ್ದರು ಸೇವೆ ಸಲ್ಲಿಸಲು ನಾನು ಕೆಲಸ ಮಾಡುತ್ತೇನೆಂದು ಮತ್ತೊಬ್ಬ ನೌಕರ ಹೇಳಿದ್ದಾರೆ. 

"ಜಂಟಿ ಆಯುಕ್ತರು ಈ ಸಮಸ್ಯೆಯನ್ನು ನಿಭಾಯಿಸುತ್ತಿದ್ದು, ಈ ವಿಚಾರದಿಂದ ನೌಕರರನ್ನು ದೂರ ಇರಿಸಲಾಗಿದೆ. ಈ ನೌಕರರನ್ನು ವಿಧಾನಸಭಾ ಕ್ಷೇತ್ರಗಳಿಗೆ ಡೇಟಾ ಎಂಟ್ರಿ ಆಪರೇಟರ್‌ಗಳಾಗಿ ನೇಮಕ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. 

ಕ್ರಿಸ್ಟಲ್‌ ಇನ್ಫೊಸಿಸ್ಟಂ ಅಂಡ್ ಸರ್ವಿಸಸ್‌ ಎಂಬ ಹೊರಗುತ್ತಿಗೆ ಸಂಸ್ಥೆ ಈ ನೌಕರರನ್ನು ಬಿಬಿಎಂಪಿಗೆ ಪೂರೈಸಿದೆ. ಘಟನೆ ಬಳಿಕ ಪ್ರತಿಕ್ರಿಯೆ ನೀಡಿರುವ ಇಲ್ಲಿನ ಸದಸ್ಯರು, ಕಂಪನಿಯ ಮಾಲೀಕರು ಈ ನೌಕರರ ಕೆಲಸ ಕುರಿತು ನಿರ್ಧಾರ ಕೈಗೊಂಡಿದೆ. ವಾರ್ ರೂಮ್ ನಲ್ಲಿ ಸಿಬ್ಬಂದಿಗಳ ಕೊರತೆ ಇರಬಾರದು. 16 ನೌಕರರ ಬದಲಿಗೆ ಬೇರೆ ನೌಕರರನ್ನು ನೇಮಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ನಡುವೆ ಕಂಪನಿಯ ಮಾಲೀಕ ವಿಜಯ್ ಕುಮಾರ್ ಅವರು ಪ್ರತಿಕ್ರಿಯೆ ನೀಡಲು ಸಂಪರ್ಕಕ್ಕೆ ಸಿಕ್ಕಿಲ್ಲ. 

ಕೋವಿಡ್‌ ದಕ್ಷಿಣ ವಲಯ ವಾರ್‌ ರೂಮ್‌ನ ಉಸ್ತುವಾರಿ, ಐಎಎಸ್‌ ಅಧಿಕಾರಿ ತುಳಸಿ ಮದ್ದಿನೇನಿ ಅವರು ಮಾತನಾಡಿ, 16 ನೌಕರರು ಪಾಲಿಕೆಗೆ ಪತ್ರ ಬರೆದು ಮರು ನೇಮಕ ಮಾಡಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದರು. ಕೆಲಸ ಕಳೆದುಕೊಂಡ ಬಳಿಕ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಮರು ನೇಮಕ ಮಾಡಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದರು. ಹೀಗಾಗಿ ನೌಕರನನ್ನು ಸಂಸ್ಥೆ ನಿರ್ಧಾರದಂತೆ ಮರು ನೇಮಕ ಮಾಡಿಕೊಳ್ಳಲಾಗುತ್ತಿದೆ. ಉದ್ಯೋಗ ಭರವಸೆಯನ್ನು ನಾನು ನೀಡಬಲ್ಲೆ. ವಾರ್ ರೂಮ್ ನಲ್ಲಿ ಸಿಬ್ಬಂದಿಗಳ ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT