ಬಿಬಿಎಂಪಿ ಕಚೇರಿ 
ರಾಜ್ಯ

ಕೊರೋನಾ ನಿಯಂತ್ರಣಕ್ಕೆ ಮುಂಬಯಿ ಮಾದರಿ ಅಳವಡಿಕೆಗೆ ಬಿಬಿಎಂಪಿ ಮುಂದು!

ಕೋವಿಡ್‌ ನಿಯಂತ್ರಿಸಲು ಮುಂಬೈ ಮತ್ತು ಚೆನ್ನೈನಲ್ಲಿ ಅನುಸರಿಸಿದ ಮಾದರಿಯಲ್ಲಿ ಬೆಂಗಳೂರಿನಲ್ಲಿಯೂ ವಾರ್ಡ್ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲು ನಿರ್ಧರಿಸಲಾಗಿದೆ.

ಬೆಂಗಳೂರು: ಕೋವಿಡ್‌ ನಿಯಂತ್ರಿಸಲು ಮುಂಬೈ ಮತ್ತು ಚೆನ್ನೈನಲ್ಲಿ ಅನುಸರಿಸಿದ ಮಾದರಿಯಲ್ಲಿ ಬೆಂಗಳೂರಿನಲ್ಲಿಯೂ ವಾರ್ಡ್ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ಕೋವಿಡ್‌ ವಾರ್‌ ರೂಂ ಮತ್ತು ಕಾಲ್‌ ಸೆಂಟರ್‌ ನಿರ್ವಹಣೆಯ ಉಸ್ತುವಾರಿ ಹೊತ್ತಿರುವ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು

ಕೊರೋನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ಹೀಗಿರುವಾಗ ಬೆಂಗಳೂರಿನಲ್ಲಿ ಕೊರೋನಾ ಪರಿಸ್ಥಿತಿ ನಿರ್ವಹಣೆಗೆ ಮುಂಬೈ ಮಾದರಿಯನ್ನು ಅನುಸರಿಸಲು ಸರ್ಕಾರ ನಿರ್ಧರಿಸಿದೆ. ಮಹಾನಗರದ ಎಲ್ಲಾ 198 ವಾರ್ಡ್‌ಗಳಲ್ಲಿ ವಿಕೇಂದ್ರೀಕೃತ ಚಿಕಿತ್ಸೆ ಮತ್ತು ತುರ್ತು ಪ್ರತಿಕ್ರಿಯೆ ಸಮಿತಿ ರಚಿಸಲು ಸರ್ಕಾರ ಮುಂದಾಗಿದೆ ಎಂದು ಹೇಳಿದ್ದಾರೆ.

ಇಂತಹುದ್ದೊಂದು ಯೋಜನೆ ಜಾರಿಗೊಳಿಸಲು ಶನಿವಾರ ಸರ್ಕಾರ ನಿರ್ಧರಿಸಿದ್ದು, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಈ ಮಾಹಿತಿಯನ್ನು ಖಚಿತಪಡಿಸಿದ್ದಾರೆ. ಅಲ್ಲದೇ ನಗರದ ಪ್ರತಿಯೊಬ್ಬ ವ್ಯಕ್ತಿಯ ಸುರಕ್ಷತೆಗಾಗಿ ಈ ಕ್ರಮ ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಸಮಿತಿ ಜೊತೆ ಸಂಪರ್ಕ ಸಾಧಿಸಿ, ಸೂಕ್ತವಾದ ಆರೋಗ್ಯ ವ್ಯವಸ್ಥೆ ಪಡೆದುಕೊಳ್ಳಲು ಜನರಿಗೆ ಸಾಧ್ಯವಾಗುತ್ತದೆ ಎಂದಿದ್ದಾರೆ. ವಾರ್ಡ್‌ ಮಟ್ಟದ ಈ ಸಮಿತಿ ಬಹುತೇಕ ನಗರಗಳಲ್ಲಿ ಯಶಸ್ವಿಯಾಗಿದೆ. 

ಸೂಕ್ತ ಸಮಯದಲ್ಲಿ ಸೂಕ್ತವಾದ ಚಿಕಿತ್ಸೆ ನಿಡಲು ಸಹಕಾರಿಯಾಗುತ್ತದೆ. ಸದ್ಯಕ್ಕೀಗ ಇರುವ ಕೆಂದ್ರೀಕೃತ ವ್ಯವಸ್ಥೆಯಿಂದ ಟೆಸ್ಟ್‌ ರಿಪೋರ್ಟ್‌ ನೀಡುವ ಪ್ರಕ್ರಿಯೆ, ಆಸ್ಪತ್ರೆಗೆ ದಾಖಲಾಗುವ ಪ್ರಕ್ರಿಯೆ ಹಾಗೂ ಬಿಯು ನಂಬರ್ ಒದಗಿಸುವ ಪ್ರಕ್ರಿಯೆ ಹೀಗೆ ಎಲ್ಲಾ ವಿಚಾರದಲ್ಲೂ ವಿಳಂಬವಾಗುತ್ತಿದೆ ಎಂದೂ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ಪ್ರತಿ ವಾರ್ಡಿನಲ್ಲಿ ವೈದ್ಯರು, ದಾದಿಯರು, ಸ್ವಯಂ ಸೇವಕರು, ಸ್ಥಳೀಯ ನಿವಾಸಿಗಳ ಸಂಘಗಳ ಪದಾಧಿಕಾರಿಗಳಿರುವ ಕನಿಷ್ಠ 50 ಜನರ ಸಮಿತಿ ರಚನೆ. ಈ ಸಮಿತಿ ಸೋಂಕಿತರನ್ನು ಚಿಕಿತ್ಸೆಯ ಅಗತ್ಯವನ್ನು ಆದ್ಯತೆ ಆಧಾರದಲ್ಲಿ ನಿರ್ಧರಿಸುವ ಕೇಂದ್ರಕ್ಕೆ (ಟ್ರಯೇಜಿಂಗ್ ಸೆಂಟರ್‌) ಕರೆತಂದು, ರೋಗ ಲಕ್ಷಣಗಳಿಗೆ ಅನುಗುಣವಾಗಿ ವರ್ಗೀಕರಿಸುತ್ತದೆ.

 ಆಸ್ಪತ್ರೆಯಲ್ಲಿ ಆಧಾರ್ ಆಧಾರಿತ ಬಯೋಮೆಟ್ರಿಕ್ ವ್ಯವಸ್ಥೆಯೂ ಜಾರಿಗೊಳಿಸುವ ಸಾಧ್ಯತೆ ಇದೆ.  ವಾರ್ಡ್‌ ಸಮಿತಿಗಳು ಸಾಧಾರಣ ರೋಗಲಕ್ಷಣ ಇರುವವರಿಗೆ ಮನೆಯಲ್ಲಿ ಕ್ವಾರಂಟೈನ್‌ ಆಗಲು ಸೂಚಿಸುತ್ತವೆ. ಈ ನಿಟ್ಟಿನಲ್ಲಿ ಔಷದ ಕಿಟ್ ಒದಗಿಸಲಿವೆ. ಆಸ್ಪತ್ರೆಗೆ ದಾಖಲಿಸಬೇಕಾದವರನ್ನು ರೋಗಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆಗೆ ದಾಖಲಿಸಲಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT