ಸಂಗ್ರಹ ಚಿತ್ರ 
ರಾಜ್ಯ

ನಿಯಮ ಉಲ್ಲಂಘಿಸಿದವರಿಗೆ ಬಿಸಿ ಮುಟ್ಟಿಸಿದ ಪೊಲೀಸರು: ಎರಡು ದಿನದಲ್ಲಿ 5 ಸಾವಿರಕ್ಕೂ ಹೆಚ್ಚು ವಾಹನ ಜಪ್ತಿ!

ಕೊರೋನಾ ಕರ್ಫ್ಯೂ ಕೊನೆಯ ದಿನಗಳಾದ ಶನಿವಾರ ಮತ್ತು ಭಾನುವಾರದಂದು ನಿಯಮ ಉಲ್ಲಂಘಿಸಿ ರಸ್ತೆಗಿಳಿದ ಜನರ ವಿರುದ್ಧ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. 

ಬೆಂಗಳೂರು: ಕೊರೋನಾ ಕರ್ಫ್ಯೂ ಕೊನೆಯ ದಿನಗಳಾದ ಶನಿವಾರ ಮತ್ತು ಭಾನುವಾರದಂದು ನಿಯಮ ಉಲ್ಲಂಘಿಸಿ ರಸ್ತೆಗಿಳಿದ ಜನರ ವಿರುದ್ಧ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. 

ಅಗತ್ಯ ವಸ್ತುಗಳ ಖರೀದಿ ಹೊರತುಪಡಿಸಿ ಬೇಕಾಬಿಟ್ಟಿ ರಸ್ತೆಗಿಳಿದ ನಗರದ ಜನತೆಗೆ ಬಿಸಿ ಮುಟ್ಟಿಸಿರುವ ಪೊಲೀಸರು ಸುಮಾರು 5000ಕ್ಕೂ ಹೆಚ್ಚು ವಾಹನಗಳನ್ನು ಮುಟ್ಟುಗೋಲು ಹಾಕಿಕೊಂಡು, ನೂರಾರು ಪ್ರಕಱಣ ದಾಖಲಿಸಿ ದಂಡ ವಿಧಿಸಿದ್ದಾರೆ. 

ಇಷ್ಟು ಮಾತ್ರವಲ್ಲದೆ, ಈಗ ವಶಪಡಿಸಿಕೊಂಡಿರುವ ಹಾಗೂ ಇನ್ನು ಮುಂದಿನ ದಿನಗಳಲ್ಲಿ ವಶಪಡಿಸಿಕೊಳ್ಳುವ ಎಲ್ಲಾ ರೀತಿಯ ವಾಹನಗಳನ್ನು ಮೇ.24ರವರೆಗೆ ಮಾಲೀಕರಿಗೆ ಮರಳಿ ನೀಡಲಾಗುವುದಿಲ್ಲ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. 

ಶನಿವಾರ ಒಂದೇ ದಿನ 2723 ದ್ವಿಚಕ್ರ ವಾಹನಗಳು, 171 ತ್ರಿಚಕ್ರ ವಾಹನಗಳು, 106 ನಾಲ್ಕು ಚಕ್ರದ ವಾಹನ ಸೇರಿದಂತೆ ಒಟ್ಟು 3000 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಭಾನುವಾರ ಕೂಡ ಕಾರ್ಯಾಚರಣೆ ನಡೆಸಿದ್ದ ಪೊಲೀಸರು 1984 ದ್ವಿಚಕ್ರ ವಾಹನಗಳು, 99 ತ್ರಿಚಕ್ರ ವಾಹನಗಳು, 144 ನಾಲ್ಕು ಚಕ್ರಗಳ ವಾಹನ ಸೇರಿದಂತೆ 2227 ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಂತೆ ಎರಡು ದಿನಗಳಲ್ಲಿ 5,.227 ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT