ರಂಗಕರ್ಮಿ ಆರ್‌.ಎಸ್‌. ರಾಜಾರಾಂ 
ರಾಜ್ಯ

ರಂಗಕರ್ಮಿ ಆರ್‌.ಎಸ್‌. ರಾಜಾರಾಂ ಕೋವಿಡ್‌ಗೆ ಬಲಿ

ರಾಜ್ಯ ಹಣಕಾಸು ಇಲಾಖೆಯ ಅಧೀನ ಕಾರ್ಯದರ್ಶಿ, ವೇದಿಕೆ ಫೌಂಡೇಷನ್ ಸಂಸ್ಥೆಯ ರೂವಾರಿ ಹಾಗೂ ರಂಗಕರ್ಮಿ ಆರ್‌.ಎಸ್‌.ರಾಜಾರಾಂ ಕೋವಿಡ್‌ ಸೋಂಕಿನಿಂದ ಮೃತಪಟ್ಟಿದ್ದಾರೆ.

ಬೆಂಗಳೂರು: ರಾಜ್ಯ ಹಣಕಾಸು ಇಲಾಖೆಯ ಅಧೀನ ಕಾರ್ಯದರ್ಶಿ, ವೇದಿಕೆ ಫೌಂಡೇಷನ್ ಸಂಸ್ಥೆಯ ರೂವಾರಿ ಹಾಗೂ ರಂಗಕರ್ಮಿ ಆರ್‌.ಎಸ್‌.ರಾಜಾರಾಂ ಕೋವಿಡ್‌ ಸೋಂಕಿನಿಂದ ಮೃತಪಟ್ಟಿದ್ದಾರೆ.

ರಾಜಾರಾಂ ಅವರು 1972ರಿಂದ 'ನಟರಂಗ' ಮತ್ತು 1983ರಿಂದ 'ವೇದಿಕೆ' ಯ ರಂಗ ಚಟುವಟಿಕೆಗಳಲ್ಲಿ ತೊಡಗಿ ಸಿ.ಆರ್. ಸಿಂಹ ಅವರ ನಿರ್ದೇಶನದಲ್ಲಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದರು.

ಇದಲ್ಲದೆ ಬಿ.ವಿ. ಕಾರಂತ, ಎಂ.ಎಸ್‌. ಸತ್ಯು, ಶ್ರೀನಿವಾಸ್‌ ಜಿ. ಕಪ್ಪಣ್ಣ, ಜಯತೀರ್ಥ ಜೋಶಿ, ಸಿ.ಎಚ್‌. ಲೋಕನಾಥ್‌, ಆರ್. ನಾಗೇಶ್‌, ಪ್ರಕಾಶ್‌ ಬೆಳವಾಡಿ ಮುಂತಾದವರ ನಿರ್ದೇಶನದಲ್ಲಿ ಮಂಡೋದರಿ, ವಿಗಡವಿಕ್ರಮರಾಯ, ಎಚ್ಚಮನಾಯಕ, ಟಿಪ್ಪುಸುಲ್ತಾನ್‌, ಕಿತ್ತೂರು ಚೆನ್ನಮ್ಮ, ರಕ್ತಾಕ್ಷಿ, ಸದಾರಮೆ, ಕಾಕನ ಕೋಟೆ, ತುಘಲಕ್, ಮೃಚ್ಛಕಟಿಕ, ಸಂಕ್ರಾಂತಿ, ಅಗ್ನಿ ಮತ್ತು ಮಳೆ ಮುಂತಾದ ನಾಟಕಗಳಲ್ಲಿ ಅಭಿನಯಿಸಿದ್ದರು.

ಹೈದರಾಬಾದ್‌, ಚೆನ್ನೈ, ಕೋಲ್ಕತ್ತಾ, ಕಾಶ್ಮೀರ ಮುಂಬಯಿ, ಚಂಡಿಗರ್ ಮುಂತಾದೆಡೆ ನಾಟಕ ಪ್ರದರ್ಶನದಲ್ಲಿ ಭಾಗಿಯಾದರು. ಹಲವಾರು ಚಲನ ಚಿತ್ರಗಳು, ಅಸಂಖ್ಯಾತ ಧಾರಾವಾಹಿಗಳಲ್ಲಿ ಅಭಿನಯಿಸಿದ್ದು, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು. ಅಲ್ಲದೆ ಹಲವಾರು ಪುರಸ್ಕಾರಗಳನ್ನು ಪಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!