ಅರವಿಂದ ಲಿಂಬಾವಳಿ ವಿಡಿಯೋ ಸಂವಾದ 
ರಾಜ್ಯ

ರಾಜ್ಯದ 10 ಜಿಲ್ಲೆಗಳಲ್ಲಿ ಭೌತಿಕ ತಪಾಸಣಾ ಕೇಂದ್ರ ಆರಂಭಿಸಲು ಚಿಂತನೆ: ಸಚಿವ ಅರವಿಂದ ಲಿಂಬಾವಳಿ

ಕೊರೋನಾ ಪರಿಸ್ಥಿತಿ ಸೂಕ್ಷ್ಮ ಎಂದು ಪರಿಗಣಿಸಲ್ಪಟ್ಟ ರಾಜ್ಯದ 10 ಜಿಲ್ಲೆಗಳಲ್ಲಿ ಶೇಕಡ ನೂರರಷ್ಟು ಭೌತಿಕ ತಪಾಸಣಾ ಕೇಂದ್ರಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಬೆಂಗಳೂರು: ಕೊರೋನಾ ಪರಿಸ್ಥಿತಿ ಸೂಕ್ಷ್ಮ ಎಂದು ಪರಿಗಣಿಸಲ್ಪಟ್ಟ ರಾಜ್ಯದ 10 ಜಿಲ್ಲೆಗಳಲ್ಲಿ ಶೇಕಡ ನೂರರಷ್ಟು ಭೌತಿಕ ತಪಾಸಣಾ ಕೇಂದ್ರಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ ರೂಂ, ಕಾಲ್ ಸೆಂಟರ್ ನಿರ್ವಹಣೆ ಮತ್ತು ಸೋಂಕಿತರಿಗೆ ವೈದ್ಯಕೀಯ ಸಲಹೆ ವ್ಯವಸ್ಥೆಯ ಮೇಲ್ವಿಚಾರಣೆಯ ನೋಡಲ್ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಆರೋಗ್ಯ ಸೌಧದಲ್ಲಿ ಇಂದು 10 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ನಗರಸಭೆ ಆಯುಕ್ತರು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡುತ್ತಿದ್ದರು. ಈಗ ಜಿಲ್ಲೆಗಳಲ್ಲಿ ಕರೋನಾ ಪರಿಸ್ಥಿತಿ ನಿರ್ವಹಣೆ ಹೇಗೆ ನಡೆಯುತ್ತಿದೆ  ಎಂಬುದರ ಮಾಹಿತಿ ಪಡೆದ ಸಚಿವರು, ಇದನ್ನು ಇನ್ನೂ ಪರಿಣಾಮಕಾರಿಯಾಗಿಸಲು ಪ್ರತಿ ಜಿಲ್ಲೆಯಲ್ಲೂ, ವಿಶೇಷವಾಗಿ ನಗರ ಪ್ರದೇಶಗಳಲ್ಲಿ ವಾರ್ಡ್ ವಾರು (ಟ್ರಯೇಜಿಂಗ್ ಸೆಂಟರ್) ಭೌತಿಕ ತಪಾಸಣಾ ಕೇಂದ್ರ ಆರಂಭಿಸುವ ಬಗ್ಗೆ ಜಿಲ್ಲಾಡಳಿತಗಳ ಅಭಿಪ್ರಾಯ ಮುಖ್ಯ ಎಂದರು.

ಜಿಲ್ಲಾಮಟ್ಟದಲ್ಲಿ ಭೌತಿಕ ತಪಾಸಣಾ ಕೇಂದ್ರ ಆರಂಭಕ್ಕೆ ಬೇಕಾದ ಮೂಲ ಸೌಕರ್ಯಗಳು ಮತ್ತು ಮಾನವ ಸಂಪನ್ಮೂಲ 
ಲಭ್ಯತೆಗಳ ಬಗ್ಗೆ ಪರಿಶೀಲನೆ ನಡೆಸಿ ಕೂಡಲೇ ತಿಳಿಸುವಂತೆ ಸೂಚಿಸಿದರು, ಸಂಚಾರಿ ತಪಾಸಣಾ ಕೇಂದ್ರ ಆರಂಭಿಸುವುದು ಕುರಿತಂತೆ  ಅನೇಕ ಸಲಹೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿದ ಸಚಿವ ಅರವಿಂದ ಲಿಂಬಾವಳಿ, ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

ದಕ್ಷಿಣ ಕನ್ನಡ, ಹುಬ್ಬಳ್ಳಿ -ಧಾರವಾಡ, ಗುಲ್ಬರ್ಗ,ದಾವಣಗೆರೆ,ಬೆಳಗಾವಿ,ಶಿವಮೊಗ್ಗ, ಮಡಿಕೇರಿ, ಉಡುಪಿ,ಮಂಡ್ಯ ಜಿಲ್ಲೆಯ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT