ಸಾಂದರ್ಭಿಕ ಚಿತ್ರ 
ರಾಜ್ಯ

ಕೋಲಾರಕ್ಕೆ ನಿಗದಿ ಮಾಡಿದ್ದ ಆಕ್ಸಿಜನ್ ಘಟಕ ಅಂತಿಮ ಕ್ಷಣದಲ್ಲಿ ತುಮಕೂರಿಗೆ ಶಿಫ್ಟ್!

ಕೆಜಿಎಫ್ ಜನರಲ್ ಆಸ್ಪತ್ರೆಯಲ್ಲಿ ಸ್ಥಾಪಿಸಬೇಕಾಗಿದ್ದ ಆಮ್ಲಜನಕ ಸ್ಥಾವರ ಕೊನೆ ಕ್ಷಣದಲ್ಲಿ ತುಮಕೂರಿಗೆ ಸ್ಥಳಾಂತರವಾಗಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ.

ಕೋಲಾರ: ಕೆಜಿಎಫ್ ಜನರಲ್ ಆಸ್ಪತ್ರೆಯಲ್ಲಿ ಸ್ಥಾಪಿಸಬೇಕಾಗಿದ್ದ ಆಮ್ಲಜನಕ ಸ್ಥಾವರ ಕೊನೆ ಕ್ಷಣದಲ್ಲಿ ತುಮಕೂರಿಗೆ ಸ್ಥಳಾಂತರವಾಗಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ.

ಕೋಲಾರದಲ್ಲಿ  ಆಮ್ಲಜನಕ ಸ್ಥಾವರ ನಿರ್ಮಾಣ ಮಾಡಲು ಅಧಿಕಾರಿಗಳು ಎಲ್ಲಾ ರೀತಿಯ ಸಿದ್ಧತೆ ನಡೆಸಿದ್ದರು, ಆದರೆ ಅಂತಿಮ ಸಮಯದಲ್ಲಿ ತುಮಕೂರಿಗೆ ಶಿಫ್ಟ್ ಆಗಿದೆ.

ಕೇಂದ್ರ ಸರ್ಕಾರದಿಂದ ರಾಜ್ಯದಲ್ಲಿ ಎರಡು ಘಟಕ ಸ್ಥಾಪಿಸಲು ಅನುಮೋದನೆ ನೀಡಲಾಗಿತ್ತು, ಕೆಜಿಎಫ್ ನಲ್ಲಿ ಮತ್ತೊಂದು ಮೈಸೂರು ಜಿಲ್ಲೆಯ ಎಚ್.ಡಿ ಕೋಟೆಯಲ್ಲಿ.

ಕೆಜಿಎಫ್ ನಲ್ಲಿ ಆಕ್ಸಿಜನ್ ಸ್ಥಾವರ ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಜಿಲ್ಲಾಧಿಕಾರಿ ಡಾ,ಸೆಲ್ವಮನಿ ಇದರ ಕಾರ್ಯಗಳಿಗಾಗಿ ಇಬ್ಬರು ಹಿರಿಯ ಅಧಿಕಾರಿಗಳನ್ನು ನಿಯೋಜಿಸಿದ್ದರು. ಇದರಲ್ಲಿ ನಗರಸಭೆಯ ಇಬ್ಬರು ಇಂಜಿನೀಯರ್ ಗಳು ಕೂಡ ಇದ್ದರು. ಆಮ್ಲಜನಕ ಸ್ಥಾವರ ಸ್ಥಾಪಿಸಲು ಕ್ರೇನ್ ಮತ್ತು ಅಗತ್ಯ ಉಪಕರಣಗಳನ್ನು ಸಿದ್ಧಪಡಿಸಲಾಗಿತ್ತು.

ಆಮ್ಲಜನಕ ಸ್ಥಾವರ ಸ್ಥಾಪನೆಗಾಗಿ ಕೆಜಿಎಫ್ ಜಿಲ್ಲಾ ಸರ್ಜನ್ ಡಾ. ಶಿವಕುಮಾರ್ ಎರಡು ಸ್ಥಳಗಳನ್ನು ಗುರುತಿಸಿದ್ದರು. ಆದರೆ ಸಂಜೆಯ ವೇಳೆಗೆ ತುಮಕೂರಿಗೆ ಸ್ಥಳಾಂತರವಾಗಿದೆ ಎಂಬ ಆದೇಶ ತಲುಪಿತು.

ನಿಮಿಷಕ್ಕೆ 500 ಲೀಟರ್ ಆಮ್ಲಜನಕವನ್ನು ಉತ್ಪಾದಿಸುವ ಆಮ್ಲಜನಕ ಸ್ಥಾವರವನ್ನು 100 ಹಾಸಿಗೆಗಳ ಕೆಜಿಎಫ್ ಜನರಲ್ ಆಸ್ಪತ್ರೆಯಲ್ಲಿ ಸ್ಥಾಪಿಸಿದ್ದರೇ ನೂರಾರು ಜೀವಗಳನ್ನು ಉಳಿಸಬಹುದಿತ್ತು ಎಂದು ಕೋಲಾರ ಸಂಸದ ಎಸ್ ಮುನಿಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT