ಸಾಂದರ್ಭಿಕ ಚಿತ್ರ 
ರಾಜ್ಯ

ಕೋಲಾರಕ್ಕೆ ನಿಗದಿ ಮಾಡಿದ್ದ ಆಕ್ಸಿಜನ್ ಘಟಕ ಅಂತಿಮ ಕ್ಷಣದಲ್ಲಿ ತುಮಕೂರಿಗೆ ಶಿಫ್ಟ್!

ಕೆಜಿಎಫ್ ಜನರಲ್ ಆಸ್ಪತ್ರೆಯಲ್ಲಿ ಸ್ಥಾಪಿಸಬೇಕಾಗಿದ್ದ ಆಮ್ಲಜನಕ ಸ್ಥಾವರ ಕೊನೆ ಕ್ಷಣದಲ್ಲಿ ತುಮಕೂರಿಗೆ ಸ್ಥಳಾಂತರವಾಗಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ.

ಕೋಲಾರ: ಕೆಜಿಎಫ್ ಜನರಲ್ ಆಸ್ಪತ್ರೆಯಲ್ಲಿ ಸ್ಥಾಪಿಸಬೇಕಾಗಿದ್ದ ಆಮ್ಲಜನಕ ಸ್ಥಾವರ ಕೊನೆ ಕ್ಷಣದಲ್ಲಿ ತುಮಕೂರಿಗೆ ಸ್ಥಳಾಂತರವಾಗಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ.

ಕೋಲಾರದಲ್ಲಿ  ಆಮ್ಲಜನಕ ಸ್ಥಾವರ ನಿರ್ಮಾಣ ಮಾಡಲು ಅಧಿಕಾರಿಗಳು ಎಲ್ಲಾ ರೀತಿಯ ಸಿದ್ಧತೆ ನಡೆಸಿದ್ದರು, ಆದರೆ ಅಂತಿಮ ಸಮಯದಲ್ಲಿ ತುಮಕೂರಿಗೆ ಶಿಫ್ಟ್ ಆಗಿದೆ.

ಕೇಂದ್ರ ಸರ್ಕಾರದಿಂದ ರಾಜ್ಯದಲ್ಲಿ ಎರಡು ಘಟಕ ಸ್ಥಾಪಿಸಲು ಅನುಮೋದನೆ ನೀಡಲಾಗಿತ್ತು, ಕೆಜಿಎಫ್ ನಲ್ಲಿ ಮತ್ತೊಂದು ಮೈಸೂರು ಜಿಲ್ಲೆಯ ಎಚ್.ಡಿ ಕೋಟೆಯಲ್ಲಿ.

ಕೆಜಿಎಫ್ ನಲ್ಲಿ ಆಕ್ಸಿಜನ್ ಸ್ಥಾವರ ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಜಿಲ್ಲಾಧಿಕಾರಿ ಡಾ,ಸೆಲ್ವಮನಿ ಇದರ ಕಾರ್ಯಗಳಿಗಾಗಿ ಇಬ್ಬರು ಹಿರಿಯ ಅಧಿಕಾರಿಗಳನ್ನು ನಿಯೋಜಿಸಿದ್ದರು. ಇದರಲ್ಲಿ ನಗರಸಭೆಯ ಇಬ್ಬರು ಇಂಜಿನೀಯರ್ ಗಳು ಕೂಡ ಇದ್ದರು. ಆಮ್ಲಜನಕ ಸ್ಥಾವರ ಸ್ಥಾಪಿಸಲು ಕ್ರೇನ್ ಮತ್ತು ಅಗತ್ಯ ಉಪಕರಣಗಳನ್ನು ಸಿದ್ಧಪಡಿಸಲಾಗಿತ್ತು.

ಆಮ್ಲಜನಕ ಸ್ಥಾವರ ಸ್ಥಾಪನೆಗಾಗಿ ಕೆಜಿಎಫ್ ಜಿಲ್ಲಾ ಸರ್ಜನ್ ಡಾ. ಶಿವಕುಮಾರ್ ಎರಡು ಸ್ಥಳಗಳನ್ನು ಗುರುತಿಸಿದ್ದರು. ಆದರೆ ಸಂಜೆಯ ವೇಳೆಗೆ ತುಮಕೂರಿಗೆ ಸ್ಥಳಾಂತರವಾಗಿದೆ ಎಂಬ ಆದೇಶ ತಲುಪಿತು.

ನಿಮಿಷಕ್ಕೆ 500 ಲೀಟರ್ ಆಮ್ಲಜನಕವನ್ನು ಉತ್ಪಾದಿಸುವ ಆಮ್ಲಜನಕ ಸ್ಥಾವರವನ್ನು 100 ಹಾಸಿಗೆಗಳ ಕೆಜಿಎಫ್ ಜನರಲ್ ಆಸ್ಪತ್ರೆಯಲ್ಲಿ ಸ್ಥಾಪಿಸಿದ್ದರೇ ನೂರಾರು ಜೀವಗಳನ್ನು ಉಳಿಸಬಹುದಿತ್ತು ಎಂದು ಕೋಲಾರ ಸಂಸದ ಎಸ್ ಮುನಿಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT