ಸುಧಾಕರ್ 
ರಾಜ್ಯ

ಗ್ರಾಮೀಣ ಭಾಗಗಳಲ್ಲಿ ಕೋವಿಡ್-19 ಪ್ರಕರಣ ಹೆಚ್ಚಳ ಸಾಧ್ಯತೆ: ಸಚಿವ ಸುಧಾಕರ್ ಎಚ್ಚರಿಕೆ

ಕೋವಿಡ್-19 ಪ್ರಕರಣಗಳು ಮೊದಲು ಜನಸಂಚಾರ ಹೆಚ್ಚಾಗಿ ಇರುವ ನಗರ ಪ್ರದೇಶಗಳಲ್ಲಿ ಹೆಚ್ಚಾಗಲಿದ್ದು ನಂತರ ಗ್ರಾಮೀಣ ಭಾಗಗಳಲ್ಲಿ, ಇತರ ಜಿಲ್ಲೆಗಳಲ್ಲಿ ಹರಡುವಿಕೆ ಹೆಚ್ಚಳವಾಗಲಿದೆ ಎಂದು ಆರೋಗ್ಯ ಹಾಗೂ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 

ಬೆಂಗಳೂರು: ಕೋವಿಡ್-19 ಪ್ರಕರಣಗಳು ಮೊದಲು ಜನಸಂಚಾರ ಹೆಚ್ಚಾಗಿ ಇರುವ ನಗರ ಪ್ರದೇಶಗಳಲ್ಲಿ ಹೆಚ್ಚಾಗಲಿದ್ದು ನಂತರ ಗ್ರಾಮೀಣ ಭಾಗಗಳಲ್ಲಿ, ಇತರ ಜಿಲ್ಲೆಗಳಲ್ಲಿ ಹರಡುವಿಕೆ ಹೆಚ್ಚಳವಾಗಲಿದೆ ಎಂದು ಆರೋಗ್ಯ ಹಾಗೂ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 

ಕೆಆರ್ ಪುರಂ, ಹೊಸಕೋಟೆ, ಚಿಕ್ಕಬಳ್ಳಾಪುರಗಳಲ್ಲಿ ತಾಲೂಕು ಆಸ್ಪತ್ರೆಗಳ ತಪಾಸಣೆ ವೇಳೆ ಸಚಿವರು ಈ ಎಚ್ಚರಿಕೆ ನೀಡಿದ್ದಾರೆ. 

ಇನ್ನು 2-3 ವಾರಗಳಲ್ಲಿ ಬೆಂಗಳೂರು ನಗರದಲ್ಲಿ ಕೊರೋನಾ ಸೋಂಕು ಪ್ರಕರಣಗಳು ನಿಯಂತ್ರಣಕ್ಕೆ ಬರಲಿದೆ ಆದರೆ ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗಗಳಲ್ಲಿ ಪ್ರಕರಣಗಳು ಹೆಚ್ಚಾಗಿ ವರದಿಯಾಗಲಿವೆ ಎಂದು ಸುಧಾಕರ್ ಹೇಳಿದ್ದು, ಜಿಲ್ಲಾ ಅಧಿಕಾರಿಗಳೊಂದಿಗೆ ಈ ಸಂಬಂಧ ಚರ್ಚೆ ನಡೆಸಿ ಏರಿಕೆಯಾಗುವ ಪ್ರಕರಣಗಳನ್ನು ನಿಭಾಯಿಸುವುದಕ್ಕಾಗಿ ಈಗಿರುವ ಮೂಲಸೌಕರ್ಯಗಳನ್ನೇ ಸಜ್ಜುಗೊಳಿಸಿಕೊಳ್ಳಬೇಕೆಂದು ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ. 

ಬೆಂಗಳೂರು ನಗರದ ಹೊರಭಾಗಗಳಲ್ಲಿಯೂ ಕೋವಿಡ್-19 ಕೇರ್ ಕೇಂದ್ರಗಳನ್ನು, ಆಸ್ಪತ್ರೆಗಳನ್ನು ಸ್ಥಾಪಿಸಬೇಕೆಂದು ಸಚಿವರು ಸೂಚನೆ ನೀಡಿದ್ದಾರೆ. ಕಳೆದ ಆರೇಳು ತಿಂಗಳಲ್ಲಿ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ 50 ಆಕ್ಸಿಜನ್ ಹಾಸಿಗೆ, ಆರು ವೆಂಟಿಲೇಟರ್ ಅಳವಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!