ಸುಧಾಕರ್ 
ರಾಜ್ಯ

ಗ್ರಾಮೀಣ ಭಾಗಗಳಲ್ಲಿ ಕೋವಿಡ್-19 ಪ್ರಕರಣ ಹೆಚ್ಚಳ ಸಾಧ್ಯತೆ: ಸಚಿವ ಸುಧಾಕರ್ ಎಚ್ಚರಿಕೆ

ಕೋವಿಡ್-19 ಪ್ರಕರಣಗಳು ಮೊದಲು ಜನಸಂಚಾರ ಹೆಚ್ಚಾಗಿ ಇರುವ ನಗರ ಪ್ರದೇಶಗಳಲ್ಲಿ ಹೆಚ್ಚಾಗಲಿದ್ದು ನಂತರ ಗ್ರಾಮೀಣ ಭಾಗಗಳಲ್ಲಿ, ಇತರ ಜಿಲ್ಲೆಗಳಲ್ಲಿ ಹರಡುವಿಕೆ ಹೆಚ್ಚಳವಾಗಲಿದೆ ಎಂದು ಆರೋಗ್ಯ ಹಾಗೂ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 

ಬೆಂಗಳೂರು: ಕೋವಿಡ್-19 ಪ್ರಕರಣಗಳು ಮೊದಲು ಜನಸಂಚಾರ ಹೆಚ್ಚಾಗಿ ಇರುವ ನಗರ ಪ್ರದೇಶಗಳಲ್ಲಿ ಹೆಚ್ಚಾಗಲಿದ್ದು ನಂತರ ಗ್ರಾಮೀಣ ಭಾಗಗಳಲ್ಲಿ, ಇತರ ಜಿಲ್ಲೆಗಳಲ್ಲಿ ಹರಡುವಿಕೆ ಹೆಚ್ಚಳವಾಗಲಿದೆ ಎಂದು ಆರೋಗ್ಯ ಹಾಗೂ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 

ಕೆಆರ್ ಪುರಂ, ಹೊಸಕೋಟೆ, ಚಿಕ್ಕಬಳ್ಳಾಪುರಗಳಲ್ಲಿ ತಾಲೂಕು ಆಸ್ಪತ್ರೆಗಳ ತಪಾಸಣೆ ವೇಳೆ ಸಚಿವರು ಈ ಎಚ್ಚರಿಕೆ ನೀಡಿದ್ದಾರೆ. 

ಇನ್ನು 2-3 ವಾರಗಳಲ್ಲಿ ಬೆಂಗಳೂರು ನಗರದಲ್ಲಿ ಕೊರೋನಾ ಸೋಂಕು ಪ್ರಕರಣಗಳು ನಿಯಂತ್ರಣಕ್ಕೆ ಬರಲಿದೆ ಆದರೆ ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗಗಳಲ್ಲಿ ಪ್ರಕರಣಗಳು ಹೆಚ್ಚಾಗಿ ವರದಿಯಾಗಲಿವೆ ಎಂದು ಸುಧಾಕರ್ ಹೇಳಿದ್ದು, ಜಿಲ್ಲಾ ಅಧಿಕಾರಿಗಳೊಂದಿಗೆ ಈ ಸಂಬಂಧ ಚರ್ಚೆ ನಡೆಸಿ ಏರಿಕೆಯಾಗುವ ಪ್ರಕರಣಗಳನ್ನು ನಿಭಾಯಿಸುವುದಕ್ಕಾಗಿ ಈಗಿರುವ ಮೂಲಸೌಕರ್ಯಗಳನ್ನೇ ಸಜ್ಜುಗೊಳಿಸಿಕೊಳ್ಳಬೇಕೆಂದು ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ. 

ಬೆಂಗಳೂರು ನಗರದ ಹೊರಭಾಗಗಳಲ್ಲಿಯೂ ಕೋವಿಡ್-19 ಕೇರ್ ಕೇಂದ್ರಗಳನ್ನು, ಆಸ್ಪತ್ರೆಗಳನ್ನು ಸ್ಥಾಪಿಸಬೇಕೆಂದು ಸಚಿವರು ಸೂಚನೆ ನೀಡಿದ್ದಾರೆ. ಕಳೆದ ಆರೇಳು ತಿಂಗಳಲ್ಲಿ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ 50 ಆಕ್ಸಿಜನ್ ಹಾಸಿಗೆ, ಆರು ವೆಂಟಿಲೇಟರ್ ಅಳವಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT