ರಾಜ್ಯ

ನೇಪಾಳ ಮೂಲದ ನಾಲ್ವರ ಬಂಧನ: 75 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

Vishwanath S

ಬೆಂಗಳೂರು: ಡಿಜೆ ಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಕಳವು ಮಾಡುತ್ತಿದ್ದ ನೇಪಾಳ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಸೆಕ್ಯುರಿಟಿ ಗಾರ್ಡ್ ಗಳಾದ ಮನೋಜ್(37), ಕೇಶವ ರಾಜ್ ಭಟ್(56),  ಪ್ರಕಾಶ್ ಬಹದ್ದೂರ ಸೂದ್(23) ಹಾಗೂ ವಿಕ್ರಂಸಿಂಗ್(36) ಬಂಧಿತ ಆರೋಪಿಗಳು.

ಬಂಧಿತರಿಂದ 75 ಲಕ್ಷ ರೂ. ಮೌಲ್ಯದ 221 ಗ್ರಾಂ ಚಿನ್ನದ ಆಭರಣಗಳು, 13 ಗ್ರಾಂ ವಜ್ರದ ಆಭರಣಗಳು ಹಾಗೂ 500 ಗ್ರಾಂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಪ್ರಕರಣಗಳ ತಡೆಗೆ ವಿಶೇಷ ಕ್ರಮ ಕೈಗೊಂಡು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೆಜಿ ಹಳ್ಳಿ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಜಗದೀಶ್ ಕೆ ಎಸ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

SCROLL FOR NEXT