ಕರಾವಳಿ ಭದ್ರತಾ ಪೊಲೀಸರು ಮೀನುಗಾರರಿಗೆ ಎಚ್ಚರಿಕೆ ಸಂದೇಶ ನೀಡುತ್ತಿರುವುದು 
ರಾಜ್ಯ

ಅರಬ್ಬೀ ಸಮುದ್ರದಲ್ಲಿ ಟೌಕ್ಟೆ ಚಂಡಮಾರುತ ಸಾಧ್ಯತೆ: ಕರಾವಳಿ ಮೀನುಗಾರರಿಗೆ ಮುನ್ನೆಚ್ಚರಿಕೆ

ಅರಬ್ಬೀ ಸಮುದ್ರದಲ್ಲಿ ಟೌಕ್ಟೆ ಚಂಡಮಾರುತ ಗುರುವಾರ(ಮೇ 13)ದಂದು ಏಳುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ಈಗಾಗಲೇ ಸಮುದ್ರ ತೀರದಲ್ಲಿ ಮೀನುಗಾರಿಕೆಗೆ ಹೋಗಿರುವವರು ದಡ ಸೇರುವಂತೆ ಕರಾವಳಿ ಭದ್ರತಾ ಪಡೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಟೌಕ್ಟೆ ಚಂಡಮಾರುತ ಗುರುವಾರ(ಮೇ 13)ದಂದು ಏಳುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ಈಗಾಗಲೇ ಸಮುದ್ರ ತೀರದಲ್ಲಿ ಮೀನುಗಾರಿಕೆಗೆ ಹೋಗಿರುವವರು ದಡ ಸೇರುವಂತೆ ಕರಾವಳಿ ಭದ್ರತಾ ಪಡೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಅರಬ್ಬೀ ಸಮುದ್ರ ಮೂಲಕ ಟೌಕ್ಟೆ ಚಂಡಮಾರುತ ಇಂದು ಎದ್ದು ಮೇ 16ರ ಹೊತ್ತಿಗೆ ತೀವ್ರವಾಗುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಮುನ್ನೆಚ್ಚರಿಕೆ ವಹಿಸಬೇಕೆಂದು ಎಚ್ಚರಿಕೆ ಸಂದೇಶ ನೀಡಿದ್ದಾರೆ. 

ಅರಬ್ಬಿ ಸಮುದ್ರದ ಆಗ್ನೇಯ ಭಾಗ, ಹಿಂದೂ ಮಹಾಸಾಗರದ ಸಮಭಾಜಕ ಪ್ರದೇಶ, ಮಾಲ್ಡೀವ್ಸ್ ಮತ್ತು ಲಕ್ಷದ್ವೀಪದಲ್ಲಿ ಇಂದು ಪ್ರತಿ ತಾಸಿಗೆ 40ರಿಂದ 50 ಕಿಲೋ ಮೀಟರ್ ವೇಗದ ಬಿರುಗಾಳಿ ಬೀಸಲಿದ್ದು, ಅದು 60 ಕಿಲೋಮೀಟರ್ ವೇಗದ ತೀವ್ರತೆ ಪಡೆದು ಕೇರಳ ಕರಾವಳಿಯತ್ತ ಮುನ್ನುಗ್ಗಲಿದೆ. ಹಾಗಾಗಿ, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT