ರಾಜ್ಯ

ಕೊರೋನಾ ಉಲ್ಬಣ: ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆ ನೀಡಲು ಆದೇಶ

Raghavendra Adiga

ಬೆಂಗಳೂರು: ರಾಜ್ಯದಲ್ಲಿ ದಿನ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಕಾರಣ ಉಂತಾದ ಸಂಕಟದ ಪರಿಸ್ಥಿತಿಯಲ್ಲಿ ರಾಜ್ಯ ಸಂಪುಟ ದರ್ಜೆಯ ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು ಕೋವಿಡ್ 19 ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅಲ್ಲದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಜ ಈ ನಿಟ್ಟಿನಲ್ಲಿ ಸೂಚನೆ ನೀಡಿದ್ದು "ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರ ಸೂಚನೆಯಂತೆ, ರಾಜ್ಯದ ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು (ದಿನಾಂಕ: 01.05.2021 ರಿಂದ ಅನ್ವಯವಾಗುವಂತೆ) ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸಲು ಸರ್ಕಾರದ ಆದೇಶ ಹೊರಡಿಸಲಾಗಿದೆ." ಎಂದು ಮುಖ್ಯಮಂತ್ರಿ ಅವರ ಕಚೇರಿ ಹೇಳಿದೆ.

SCROLL FOR NEXT