ಸಾಂದರ್ಭಿಕ ಚಿತ್ರ 
ರಾಜ್ಯ

ನರೇಗಾದಡಿ ಕೆಲಸಕ್ಕೆ ಸರ್ಕಾರ ಅನುಮತಿ, ಹೊಸ ನಿಯಮ ಜಾರಿ 

ಲಾಕ್ ಡೌನ್ ಸಮಯದಲ್ಲಿ ನರೇಗಾದಡಿ ಕೆಲಸ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಸರಣದ ಸರಪಳಿಯನ್ನು ಮುರಿಯಲು ಪರಿಷ್ಕೃತ ಮಾರ್ಗಸೂಚಿಗಳಿಗೆ ಒಂದು ಅನುಬಂಧವನ್ನು ಸಹ ಸರ್ಕಾರ ಬಿಡುಗಡೆ ಮಾಡಿದೆ.

ಬೆಂಗಳೂರು: ಲಾಕ್ ಡೌನ್ ಸಮಯದಲ್ಲಿ ನರೇಗಾದಡಿ ಕಾರ್ಮಿಕರಿಗೆ ಕೆಲಸ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಸರಣದ ಸರಪಳಿಯನ್ನು ಮುರಿಯಲು ಪರಿಷ್ಕೃತ ಮಾರ್ಗಸೂಚಿಗಳಿಗೆ ಒಂದು ಅನುಬಂಧವನ್ನು ಸಹ ಸರ್ಕಾರ ಬಿಡುಗಡೆ ಮಾಡಿದೆ.

ನರೇಗಾದಡಿ ಕೆಲಸ ಮಾಡಲು ಅವಕಾಶ ನೀಡಲಾಗಿದೆ. ಕೋವಿಡ್ ಮಾರ್ಗಸೂಚಿಗಳೊಂದಿಗೆ ಕೆಲಸ ಮಾಡುವ ಸ್ಥಳದಲ್ಲಿ 40ಕ್ಕಿಂತ ಹೆಚ್ಚು ಜನರು ಸೇರದಂತೆ ಸರ್ಕಾರ ಸೂಚಿಸಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.

ನರೇಗಾದಡಿ ಕೆಲಸ ನಿಲ್ಲಿಸಿದ್ದನ್ನು ಈ ಹಿಂದೆ ಸಾಮಾಜಿಕ ಕಾರ್ಯಕರ್ತರು ಮತ್ತು ದಿನಗೂಲಿ ನೌಕರರ ಒಕ್ಕೂಟ ಪ್ರಶ್ನಿಸಿತ್ತು. ಸರ್ಕಾರ ನಿರ್ಮಾಣ ಕೆಲಸಗಳಿಗೆ ಮತ್ತು ಬೆಂಗಳೂರು ಮೆಟ್ರೊ ರೈಲು ಕೆಲಸಕ್ಕೆ ಲಾಕ್ ಡೌನ್ ಸಮಯದಲ್ಲಿ ಅವಕಾಶ ನೀಡಿರುವಾಗ ನಗೇರಾದಡಿ ಕೆಲಸ ನಿಲ್ಲಿಸಿದ್ದೇಕೆ ಎಂದು ಕೇಳಿತ್ತು. ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಿ ವಲಸೆ ಕಾರ್ಮಿಕರಿಗೆ ನೆರವಾಗಬೇಕು ಎಂದು ಕೇಳಿಕೊಂಡಿದ್ದರು.

ಸರ್ಕಾರ ನಿರ್ಧಾರ ಮರು ಪರಿಶೀಲಿಸದಿದ್ದರೆ ಪ್ರತಿಭಟನೆ, ಧರಣಿ ನಡೆಸುವುದಾಗಿ ಕಾರ್ಯಕರ್ತ, ರಂಗ ನಿರ್ದೇಶಕ ಪ್ರಸನ್ನ ಕೂಡ ಎಚ್ಚರಿಕೆ ನೀಡಿದ್ದರು. ಗ್ರಾಮೀಣ ಪ್ರದೇಶಗಳಲ್ಲಿ ದಿನಗೂಲಿ ನೌಕರರಿಗೆ ಕೆಲಸ ನೀಡಬೇಕೆಂದು ಹೇಳಿದ್ದರು.

ಸರ್ಕಾರ ಮೇ 24ರವರೆಗೆ ಲಾಕ್ ಡೌನ್ ಘೋಷಿಸಿದ ಹಿನ್ನೆಲೆಯಲ್ಲಿ ಅನೇಕ ವಲಸೆ ಕಾರ್ಮಿಕರು ತಮ್ಮ ಗ್ರಾಮಕ್ಕೆ ಹಿಂತಿರುಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷಕ್ಕೆ ಮುಜುಗರ ತಪ್ಪಿಸಲು ಸಚಿವ ಬಿ ನಾಗೇಂದ್ರ ರಾಜೀನಾಮೆ; ಸುಳ್ಳೇ ಬಿಜೆಪಿ ಮನೆ ದೇವರು: CM DK Shivakumar

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ: ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಾಗೇಂದ್ರ; BJP ಹೋರಾಟಕ್ಕೆ ಜಯ! Video

ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ; ಬನ್ನಿ ಅಖಾಡಕ್ಕೆ, ಬಳ್ಳಾರಿಯಲ್ಲಿ ನೀವು ರಿಜೆಕ್ಟ್ ಪೀಸ್‌ಗಳು: ರಾಮುಲು, ರೆಡ್ಡಿಗೆ ನಾಗೇಂದ್ರ ಸವಾಲು

Toxic: ಇಂತಹ ವಿಭಿನ್ನ ಸಿನಿಮಾ ಮಾಡಲು ಗಟ್ಸ್ ಬೇಕು; ಯಶ್ ಹಾಡಿ ಹೊಗಳಿದ ಕಿಚ್ಚ ಸುದೀಪ್!

ರಕ್ಷಾ ಬಂಧನ: ವಿರಾಟ್ ಕೊಹ್ಲಿ ಸಹೋದರಿಯ ಪೋಸ್ಟ್; ಫೋಟೋ ವೈರಲ್!