ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ತಾಯಿ ಮತ್ತು ಸಹೋದರನ ಶವದೊಂದಿಗೆ ಎರಡು ದಿನ ಕಳೆದ ಮಹಿಳೆ!

ಮಹಿಳೆಯೊಬ್ಬರು ತನ್ನ ತಾಯಿ ಹಾಗೂ ಸಹೋದರನ ಶವಗಳ ಜೊತೆಗೆ ಎರಡು ದಿನ ಮನೆಯಲ್ಲೇ ಕಳೆದಿರುವ ಘಟನೆ ರಾಜರಾಜೇಶ್ವರಿ ನಗರ ಠಾಣಾ ವ್ಯಾಪ್ತಿಯ ಬಿಇಎಂಎಲ್ ಬಡಾವಣೆಯಲ್ಲಿ ನಡೆದಿದೆ.

ಬೆಂಗಳೂರು: ಮಹಿಳೆಯೊಬ್ಬರು ತನ್ನ ತಾಯಿ ಹಾಗೂ ಸಹೋದರನ ಶವಗಳ ಜೊತೆಗೆ ಎರಡು ದಿನ ಮನೆಯಲ್ಲೇ ಕಳೆದಿರುವ ಘಟನೆ ರಾಜರಾಜೇಶ್ವರಿ ನಗರ ಠಾಣಾ ವ್ಯಾಪ್ತಿಯ ಬಿಇಎಂಎಲ್ ಬಡಾವಣೆಯಲ್ಲಿ ನಡೆದಿದೆ. 

ತಾಯಿ ಆರ್ಯಾಂಬ (65) ಹಾಗೂ ಹರೀಶ್‌ (45) ಎಂಬುವರ ಮೃತದೇಹಗಳು ಮನೆಯಲ್ಲಿ ಪತ್ತೆಯಾಗಿದ್ದು, ಶ್ರೀಲಕ್ಷಿ ಎಂಬುವರು ಅದೇ ಮನೆಯಲ್ಲಿ ವಾಸವಿದ್ದ ಮಾನಸಿಕ ಅಸ್ವಸ್ಥೆ ಎನ್ನಲಾಗಿದೆ.

'ಬುಧವಾರ ಮಧ್ಯಾಹ್ನ ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಅದೇ ಕಟ್ಟಡದಲ್ಲಿ ಬಾಡಿಗೆಗಿದ್ದ ಪ್ರವೀಣ್ ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಬಾಗಿಲು ಮುರಿದು ಪ್ರವೇಶಿಸಿದಾಗ ಮೊದಲಿಗೆ ಕೋಣೆಯೊಂದರಲ್ಲಿ ಹರೀಶ್ ಮೃತಪಟ್ಟಿರುವುದು ಕಂಡುಬಂತು. ಮತ್ತೊಂದು ಕೋಣೆಯಲ್ಲಿ ಆರ್ಯಾಂಬ ಅವರ ಮೃತದೇಹ ಪತ್ತೆಯಾಯಿತು’ ಎಂದು ಪೊಲೀಸರು ತಿಳಿಸಿದರು'.

ಮನೆಯನ್ನು ಪರಿಶೀಲಿಸಿದಾಗ ಮತ್ತೊಂದು ಕೋಣೆಯಲ್ಲಿ ಶ್ರೀಲಕ್ಷ್ಮಿ ಇದ್ದರು. ಆದರೆ, ಅವರು ನಡೆಯುವ ಸ್ಥಿತಿಯಲ್ಲಿ ಇರಲಿಲ್ಲ. ಬಳಿಕ ಅವರು ಮಾನಸಿಕ ಅಸ್ವಸ್ಥರೆಂದು ತಿಳಿದು ಬಂತು. ಅವರಿಗೆ ಮನೆಯಲ್ಲಿ ಇಬ್ಬರೂ ಮೃತಪಟ್ಟಿರುವ ಅರಿವೂ ಇಲ್ಲ. ಅವರನ್ನು ಸದ್ಯ ರಕ್ಷಿಸಲಾಗಿದೆ. 

ಈವರೆಗೆ ಅವರ ಸಾವಿಗೆ ನಿಖರ ಮಾಹಿತಿ ತಿಳಿದಿಲ್ಲ. ಮರಣೋತ್ತರ ಪರೀಕ್ಷೆಯ ನಂತರ ವಿಚಾರ ತಿಳಿಯಲಿದೆ. ಘಟನೆ ಸಂಬಂಧ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಏ.25ರಂದು ರ‍್ಯಾಪಿಡ್‌ ಆ್ಯಂಟಿಜೆನ್‌ ಟೆಸ್ಟ್‌ನಲ್ಲಿ (ಆರ್‌ಎಟಿ) ಹರೀಶ್ ಅವರಿಗೆ ಕೊರೊನಾ ಸೋಂಕು ದೃಢವಾಗಿತ್ತು. ಅವರ ತಾಯಿಗೂ ಸೋಂಕು ತಗುಲಿ ಇಬ್ಬರು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT