ರಾಜ್ಯ

ಆಮ್ಲಜನಕ ಸಿಲಿಂಡರ್‌ ಕಾಳಸಂತೆಯಲ್ಲಿ ಮಾರಾಟ: ಸಿಸಿಬಿ ಪೊಲೀಸರಿಂದ ಮೂವರ ಬಂಧನ 

Sumana Upadhyaya

ಬೆಂಗಳೂರು: ಕೊರೋನಾ ಸೋಂಕಿತರಿಗೆ ಆಕ್ಸಿಜನ್, ಬೆಡ್, ವೆಂಟಿಲೇಟರ್, ಅಗತ್ಯ ಔಷದೋಪಚಾರಗಳ ಕೊರತೆಯ ಮಧ್ಯೆ ಕಾಳಸಂತೆಯಲ್ಲಿ ಮಾರಾಟ ಮುಂದುವರಿಯುತ್ತಲೇ ಇದೆ.

ಕಾಳಸಂತೆಯಲ್ಲಿ ಮಾರಾಟ ಮಾಡುವವರನ್ನು ಪೊಲೀಸರು ಬಂಧಿಸುತ್ತಲೇ ಇದ್ದರೂ ಪ್ರಕರಣಗಳಿಗೆ ಇನ್ನೂ ಕಡಿವಾಣ ಬಿದ್ದಿಲ್ಲ. ಆಕ್ಸಿಜನ್ ಸಿಲಿಂಡರ್ ಮತ್ತು ಸಾಂದ್ರಕಗಳನ್ನು ಕಾಳಸಂತೆಯಲ್ಲಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈ ಆರೋಪಿಗಳು 70 ಸಾವಿರಕ್ಕೂ ಅಧಿಕ ಬೆಲೆಗೆ ಸಿಲಿಂಡರ್ ನ್ನು ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

SCROLL FOR NEXT