ಬಸವ ಜಯಂತಿ ಅಂಗವಾಗಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಸಿಎಂ ಬಿ ಎಸ್ ಯಡಿಯೂರಪ್ಪ 
ರಾಜ್ಯ

ಕೊರೋನಾ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್: ಮುಖ್ಯಮಂತ್ರಿ ಯಡಿಯೂರಪ್ಪ 

ರಾಜ್ಯದಲ್ಲಿರುವ ಕೊರೋನಾ ಲಸಿಕೆ ಕೊರತೆ ಸದ್ಯದಲ್ಲಿಯೇ ಬಗೆಹರಿಯುವ ವಿಶ್ವಾಸವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿರುವ ಕೊರೋನಾ ಲಸಿಕೆ ಕೊರತೆ ಸದ್ಯದಲ್ಲಿಯೇ ಬಗೆಹರಿಯುವ ವಿಶ್ವಾಸವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ.

ಕೊರೋನಾ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್ ಕರೆಯಲಾಗಿದೆ, ಹೀಗಾಗಿ ರಾಜ್ಯಕ್ಕೆ ಲಸಿಕೆ ಸದ್ಯಕ್ಕೆ ಸಿಗಲಿದೆ ಎಂದು ಹೇಳಿದ್ದಾರೆ.

ಇಂದು ಬಸವ ಜಯಂತಿ ಅಂಗವಾಗಿ ಬೆಂಗಳೂರಿನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ವಿಶ್ವಗುರು ಬಸವೇಶ್ವರರ ಭಾವಚಿತ್ರಕ್ಕೆ ಮಾಲಾರ್ಪಣೆ, ಪುಷ್ಪ ನಮನ ಸಲ್ಲಿಸಿದರು, ನಂತರ ನಗರದ ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಶ್ರಮ ಗೌರವವನ್ನು ಎತ್ತಿ ಹಿಡಿದು, ಕಾಯಕ ದಾಸೋಹ ತತ್ವಗಳ ಮೂಲಕ ನಾವು ಮಾಡುವ ಕೆಲಸಕ್ಕೆ ಆಧ್ಯಾತ್ಮಿಕ ಮುಖವನ್ನು ನೀಡಿದ, ವಚನಗಳ ತಿಳಿನುಡಿಗಳ ಮೂಲಕ ಸಮಾಜಕ್ಕೆ ಸರಿದಾರಿ ತೋರಿದ ಬಸವಣ್ಣನವರ ಉಪದೇಶಗಳ ಬೆಳಕಿನಲ್ಲಿ ಸಾರ್ಥಕ ಜೀವನ ನಡೆಸೋಣ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಸಂಪುಟ ಸಚಿವರು, ಬೇಲಿಮಠದ ಶಿವರುದ್ರ ಸ್ವಾಮೀಜಿ ಉಪಸ್ಥಿತರಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT