ಬಸವಣ್ಣ ಪ್ರತಿಮೆಯ ಬಾಯಿಗೆ ಮಾಸ್ಕ್ ಹಾಕುತ್ತಿರುವುದು 
ರಾಜ್ಯ

ಇಂದು ಬಸವಣ್ಣ ಜಯಂತಿ: ಸಮಾಜ ಸುಧಾರಕನ ಪ್ರತಿಮೆಯ ಬಾಯಿಗೆ ಮಾಸ್ಕ್ ತೊಡಿಸಿ ಜಾಗೃತಿ ಮೂಡಿಸಲು ಹೊಸಮಠ ಸ್ವಾಮೀಜಿ ಪ್ರಯತ್ನ 

12ನೇ ಶತಮಾನದ ಕ್ರಾಂತಿಕಾರಿ ಸಮಾಜ ಸುಧಾರಕ ಜಗಜ್ಯೋತಿ ಬಸವೇಶ್ವರರ ಜಯಂತಿ ಇಂದು. ೧೨ನೇ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ಸಾಮಾಜಿಕ ಆಂದೋಲನ ಚರಿತ್ರಾರ್ಹವಾಗಿ ಇಂದಿಗೂ ಪ್ರಸ್ತುತ.ಬಸವಣ್ಣನವರ ವಚನಗಳು ಇಂದಿಗೂ ಜನರ ನಾಲಗೆಯಲ್ಲಿ ನಲಿಯುತ್ತಿರುತ್ತದೆ.

ಮೈಸೂರು: 12ನೇ ಶತಮಾನದ ಕ್ರಾಂತಿಕಾರಿ ಸಮಾಜ ಸುಧಾರಕ ಜಗಜ್ಯೋತಿ ಬಸವೇಶ್ವರರ ಜಯಂತಿ ಇಂದು. ೧೨ನೇ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ಸಾಮಾಜಿಕ ಆಂದೋಲನ ಚರಿತ್ರಾರ್ಹವಾಗಿ ಇಂದಿಗೂ ಪ್ರಸ್ತುತ.ಬಸವಣ್ಣನವರ ವಚನಗಳು ಇಂದಿಗೂ ಜನರ ನಾಲಗೆಯಲ್ಲಿ ನಲಿಯುತ್ತಿರುತ್ತದೆ.

ಸಮಾಜದಲ್ಲಿನ ಸಾಮಾಜಿಕ ಹಾಗೂ ಆರ್ಥಿಕ ಅಸಮಾನತೆ, ಸ್ತ್ರೀ ಶೋಷಣೆ, ಮೌಢ್ಯ, ವರ್ಣಬೇಧ, ವರ್ಗಬೇಧಗಳ ತಾರತಮ್ಯದಿಂದ ತತ್ತರಿಸಿ ಹೋಗಿದ್ದ ಮಾನವ ಸಮುದಾಯಕ್ಕೆ ದಯೆ, ಪ್ರೀತಿ, ಅನುಕಂಪದ ಮಾನವೀಯ ಸ್ಪರ್ಷವನ್ನು ನೀಡಿದವರು ಬಸವಣ್ಣನವರು.
ಈ ಬಾರಿ ಬಸವಣ್ಣ ಜಯಂತಿ ದಿನ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸರ್ಕಾರಿ ಕಾರ್ಯಕ್ರಮಗಳಿಲ್ಲ. ಜನರು ಗುಂಪು ಸೇರಿ ಆಚರಣೆಗಳಿಲ್ಲ. ಎಲ್ಲ ಕಡೆಯೂ ಭಯ, ಆತಂಕದ ವಾತಾವರಣವಿದೆ. ಜನರು ಬಾಯಿ, ಮೂಗಿಗೆ ಮಾಸ್ಕ್ ಹಾಕದೆ ಹೊರಗೆ ಹೋಗುವಂತೆಯೇ ಇಲ್ಲ.

ಈ ಪರಿಸ್ಥಿತಿಯಲ್ಲಿ ಬಸವಣ್ಣನವರ ಮೂರ್ತಿಗೆ ಹೂವು-ಹಾರ ಹಾಕಿ ಗೌರವ ಸಲ್ಲಿಸಿದ ನಂತರ ಬಾಯಿಗೆ ಮಾಸ್ಕ್ ಹಾಕಿ ಜಾಗೃತಿ ಮೂಡಿಸುವ ಪ್ರಯತ್ನವನ್ನು ಮೈಸೂರಿನಲ್ಲಿಂದು ಹೊಸಮಠದ ಶ್ರೀಗಳಾದ ಚಿದಾನಂದ ಸ್ವಾಮೀಜಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT