ಬಸವಣ್ಣ ಪ್ರತಿಮೆಯ ಬಾಯಿಗೆ ಮಾಸ್ಕ್ ಹಾಕುತ್ತಿರುವುದು 
ರಾಜ್ಯ

ಇಂದು ಬಸವಣ್ಣ ಜಯಂತಿ: ಸಮಾಜ ಸುಧಾರಕನ ಪ್ರತಿಮೆಯ ಬಾಯಿಗೆ ಮಾಸ್ಕ್ ತೊಡಿಸಿ ಜಾಗೃತಿ ಮೂಡಿಸಲು ಹೊಸಮಠ ಸ್ವಾಮೀಜಿ ಪ್ರಯತ್ನ 

12ನೇ ಶತಮಾನದ ಕ್ರಾಂತಿಕಾರಿ ಸಮಾಜ ಸುಧಾರಕ ಜಗಜ್ಯೋತಿ ಬಸವೇಶ್ವರರ ಜಯಂತಿ ಇಂದು. ೧೨ನೇ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ಸಾಮಾಜಿಕ ಆಂದೋಲನ ಚರಿತ್ರಾರ್ಹವಾಗಿ ಇಂದಿಗೂ ಪ್ರಸ್ತುತ.ಬಸವಣ್ಣನವರ ವಚನಗಳು ಇಂದಿಗೂ ಜನರ ನಾಲಗೆಯಲ್ಲಿ ನಲಿಯುತ್ತಿರುತ್ತದೆ.

ಮೈಸೂರು: 12ನೇ ಶತಮಾನದ ಕ್ರಾಂತಿಕಾರಿ ಸಮಾಜ ಸುಧಾರಕ ಜಗಜ್ಯೋತಿ ಬಸವೇಶ್ವರರ ಜಯಂತಿ ಇಂದು. ೧೨ನೇ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ಸಾಮಾಜಿಕ ಆಂದೋಲನ ಚರಿತ್ರಾರ್ಹವಾಗಿ ಇಂದಿಗೂ ಪ್ರಸ್ತುತ.ಬಸವಣ್ಣನವರ ವಚನಗಳು ಇಂದಿಗೂ ಜನರ ನಾಲಗೆಯಲ್ಲಿ ನಲಿಯುತ್ತಿರುತ್ತದೆ.

ಸಮಾಜದಲ್ಲಿನ ಸಾಮಾಜಿಕ ಹಾಗೂ ಆರ್ಥಿಕ ಅಸಮಾನತೆ, ಸ್ತ್ರೀ ಶೋಷಣೆ, ಮೌಢ್ಯ, ವರ್ಣಬೇಧ, ವರ್ಗಬೇಧಗಳ ತಾರತಮ್ಯದಿಂದ ತತ್ತರಿಸಿ ಹೋಗಿದ್ದ ಮಾನವ ಸಮುದಾಯಕ್ಕೆ ದಯೆ, ಪ್ರೀತಿ, ಅನುಕಂಪದ ಮಾನವೀಯ ಸ್ಪರ್ಷವನ್ನು ನೀಡಿದವರು ಬಸವಣ್ಣನವರು.
ಈ ಬಾರಿ ಬಸವಣ್ಣ ಜಯಂತಿ ದಿನ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸರ್ಕಾರಿ ಕಾರ್ಯಕ್ರಮಗಳಿಲ್ಲ. ಜನರು ಗುಂಪು ಸೇರಿ ಆಚರಣೆಗಳಿಲ್ಲ. ಎಲ್ಲ ಕಡೆಯೂ ಭಯ, ಆತಂಕದ ವಾತಾವರಣವಿದೆ. ಜನರು ಬಾಯಿ, ಮೂಗಿಗೆ ಮಾಸ್ಕ್ ಹಾಕದೆ ಹೊರಗೆ ಹೋಗುವಂತೆಯೇ ಇಲ್ಲ.

ಈ ಪರಿಸ್ಥಿತಿಯಲ್ಲಿ ಬಸವಣ್ಣನವರ ಮೂರ್ತಿಗೆ ಹೂವು-ಹಾರ ಹಾಕಿ ಗೌರವ ಸಲ್ಲಿಸಿದ ನಂತರ ಬಾಯಿಗೆ ಮಾಸ್ಕ್ ಹಾಕಿ ಜಾಗೃತಿ ಮೂಡಿಸುವ ಪ್ರಯತ್ನವನ್ನು ಮೈಸೂರಿನಲ್ಲಿಂದು ಹೊಸಮಠದ ಶ್ರೀಗಳಾದ ಚಿದಾನಂದ ಸ್ವಾಮೀಜಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT