ಪರಿಶೀಲನೆ ನಡೆಸುತ್ತಿರುವ ಬಸವರಾಜ ಬೊಮ್ಮಾಯಿ 
ರಾಜ್ಯ

ರಾಜ್ಯದಲ್ಲೇ ಪ್ರಥಮ: ತಮ್ಮ ಮನೆಯನ್ನೇ ಕೋವಿಡ್ ಕೇರ್ ಕೇಂದ್ರವಾಗಿಸಿದ ಸಚಿವ ಬಸವರಾಜ ಬೊಮ್ಮಾಯಿ!

ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ತಮ್ಮ ಮನೆಯನ್ನೇ ಕೊವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿದ್ದಾರೆ. 

ಹಾವೇರಿ: ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ತಮ್ಮ ಮನೆಯನ್ನೇ ಕೊವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿದ್ದಾರೆ. 

ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿರುವ ಬಸವರಾಜ ಬೊಮ್ಮಾಯಿ ನಿವಾಸದ ವರಾಂಡವನ್ನು ಕೊರೊನಾ ರೋಗಿಗಳ ಚಿಕಿತ್ಸೆಗಾಗಿ ಮಾರ್ಪಡಿಸಿ 50 ಬೆಡ್​ಗಳ ವ್ಯವಸ್ಥೆ ಮಾಡಲಾಗಿದೆ. ಆಕ್ಸಿಜನ್ ವ್ಯವಸ್ಥೆ ಕೂಡ ಮಾಡಲಾಗಿದೆ, ಇದೇ ಮೊದಲ ಬಾರಿಗೆ ಸಚಿವರೊಬ್ಬರ ನಿವಾಸವನ್ನು ಕೋವಿಡ್ ಕೇರ್ ಕೇಂದ್ರ ಮಾಡಲಾಗಿದೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಲ್ಲಿರುವ ಕೊವಿಡ್ ಸೋಂಕಿತರಿಗಾಗಿ ಬಸವರಾಜ ಬೊಮ್ಮಾಯಿಯವರು ಈ ವ್ಯವಸ್ಥೆ ಮಾಡಿದ್ದು, ಈ ಕೇರ್ ಸೆಂಟರ್​​ನಲ್ಲಿ ರೋಗಿಗಳಿ ಚಿಕಿತ್ಸೆ ನೀಡಲು ವೈದ್ಯರು ಮತ್ತು ಸಿಬ್ಬಂದಿಯ ನೇಮಕ ಮಾಡಲಾಗಿದೆ. ಶೀಘ್ರವೇ 50 ಆಮ್ಲಜನಕ ಕಾನ್ಸಂಟ್ರೇಟರ್ ಗಳು ಬರಲಿವೆ. ಮುಂದಿನ ಕೆಲ ದಿನಗಳಲ್ಲೇ ಬರುವ ನಿರೀಕ್ಷೆ ಇದೆ, ಅವುಗಳನ್ನು ಪ್ರತಿ ಬೆಡ್ ಗೆ ಅಳವಡಿಸಲಾಗುವುದು.

ಇದರಿಂದ ಶಿಗ್ಗಾವಿ ಆಸ್ಪತ್ರೆಯಲ್ಲಿ ಬೆಡ್ ನ ಕೊರತೆ ಕಡಿಮೆಯಾಗಲಿದೆ, ತಮ್ಮ ಮನೆಯ ಆವರಣದಲ್ಲಿ ನಿರ್ಮಿಸಲಾಗಿರುವ ಕೋವಿಡ್ ಕೇರ್ ಕೇಂದ್ರ ಪರಿಶೀಲಿಸಿ ಮಾತನಾಡಿದ ಅವರು ದಿನದ 24 ಗಂಟೆಯೂ ರೋಗಿಗಳ ಚಿಕಿತ್ಸೆಗಾಗಿ ಸಿಬ್ಬಂದಿ ಇರಲಿದ್ದಾರೆ ಎಂದು ತಿಳಿಸಿದ್ದಾರೆ.

ತಮ್ಮ ಕುಟುಂಬ ಹುಬ್ಬಳ್ಳಿಯಲ್ಲಿ ವಾಸವಿದ್ದು, ತಾವು ಕ್ಷೇತ್ರಕ್ಕೆ ಭೇಟಿ ನೀಡಿದಾಗ ಮಾತ್ರ ಶಿಗ್ಗಾವಿ ಮನೆಯಲ್ಲಿರುವುದಾಗಿ ತಿಳಿಸಿದರು.

ಶಿಗ್ಗಾವಿ ತಾಲೂಕು ಆಸ್ಪತ್ರೆಯಲ್ಲಿ 88 ಬೆಡ್ ಇವೆ, ಅದರಲ್ಲಿ 44 ಆಕ್ಸಿಜನ್ ಬೆಡ್ ಇದೆ, ಅದರಲ್ಲಿ ಐದು ವೆಂಟಿಲೇಟರ್ ಮತ್ತು ಐಸಿಯು ಬೆಡ್ ಇದೆ, ಎಲ್ಲಾ ಬೆಡ್ ಗಳನ್ನು ಸೋಂಕಿತ ರೋಗಿಗಳಿಗಾಗಿ ನೀಡಲಾಗಿದೆ. 
.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ; ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಸಾಕು ಮಾಡಿ: ಸೇವಾಶ್ರಯ ಪ್ರಕರಣದಲ್ಲಿ ಕೊನೆಗೂ ಅಭಿಷೇಕ್ ಬ್ಯಾನರ್ಜಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್, ಬಂಧನಕ್ಕೆ ತಡೆ!

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಶೇ. 7.5 ರಷ್ಟು ಮೀಸಲಾತಿ – ಕರಡು ನಿಯಮ ಪ್ರಕಟ

ಸ್ವಚ್ಛ ವಾಯು ಸರ್ವೇಕ್ಷಣ 2026: ಬೆಂಗಳೂರು, ಶ್ರೀನಗರ ಹಿಂದಿಕ್ಕಿದ ದೆಹಲಿ; ಅತ್ಯಂತ ಸ್ವಚ್ಛ ಗಾಳಿ ಯಾವ ನಗರದಲ್ಲಿದೆ ಗೊತ್ತಾ?

ಸತ್ಯ ನಿಕೇತನ ಪಿಜಿ ಕುಸಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ; ದುರಂತಕ್ಕೆ ಮಾಲೀಕನಷ್ಟೇ ಅಲ್ಲ MCD, DU ಸಹ ಹೊಣೆ!