ಸಾಂದರ್ಭಿಕ ಚಿತ್ರ 
ರಾಜ್ಯ

ಪೊಲೀಸರ ಪ್ರತಿ ನಡೆಯನ್ನು ಪ್ರಶ್ನೆ ಮಾಡುವ ಮುನ್ನ ನಮ್ಮ ನಡೆಯನ್ನು ಆತ್ಮಾವಲೋಕನ ಮಾಡಿಕೊಳ್ಳೋಣ: ಡಿಜಿಪಿ ಪ್ರವೀಣ್ ಸೂದ್

ಮೊನ್ನೆ ಮೇ 10ರಂದು ರಾಜ್ಯದಲ್ಲಿ ಕೊರೋನಾ ಲಾಕ್ ಡೌನ್ ಆರಂಭಗೊಂಡ ನಂತರ ಪೊಲೀಸರ ನಡೆಗೆ ವಿರೋಧ ಪಕ್ಷದ ನಾಯಕರು, ಸಾರ್ವಜನಿಕರು ಸಾಕಷ್ಟು ವಿರೋಧ, ಟೀಕೆ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು: ಮೊನ್ನೆ ಮೇ 10ರಂದು ರಾಜ್ಯದಲ್ಲಿ ಕೊರೋನಾ ಲಾಕ್ ಡೌನ್ ಆರಂಭಗೊಂಡ ನಂತರ ಪೊಲೀಸರ ನಡೆಗೆ ವಿರೋಧ ಪಕ್ಷದ ನಾಯಕರು, ಸಾರ್ವಜನಿಕರು ಸಾಕಷ್ಟು ವಿರೋಧ, ಟೀಕೆ ವ್ಯಕ್ತಪಡಿಸುತ್ತಿದ್ದಾರೆ.

ಕೊರೋನಾ ಸೋಂಕು ತಡೆಗೆ ನಾಗರಿಕರು ಸಾಧ್ಯವಾದಷ್ಟು ಮನೆಯಿಂದ ಹೊರಬರದೆ ಮನೆಯೊಳಗೆ ಕುಳಿತುಕೊಳ್ಳಬೇಕೆಂದು ಸರ್ಕಾರದ ಜನಪ್ರತಿನಿಧಿಗಳು, ಪೊಲೀಸರು ಸಾಕಷ್ಟು ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದರೂ ಕೆಲವರು ಮನೆಬಿಟ್ಟು ಆಚೆ ಸುಖಾಸುಮ್ಮನೆ ಬರುತ್ತಿದ್ದಾರೆ.

24 ಗಂಟೆಯಲ್ಲಿ ಬಹುತೇಕ ಸಮಯವನ್ನು ಹೊರಗೆ ಕಳೆಯುವ ಪೊಲೀಸರ ಜೀವನವೂ ಇಂತಹ ಸಂದರ್ಭದಲ್ಲಿ ಅಪಾಯದಲ್ಲಿರುತ್ತದೆ. ಈ ಸಂದರ್ಭದಲ್ಲಿ ನಾಗರಿಕರು ಪೊಲೀಸರಿಗೆ ಸಹಕರಿಸಬೇಕು ಎಂದು ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ಕೋರಿದ್ದಾರೆ.

ಲಾಕ್ ಡೌನ್ ಮಾಡಿರುವುದು ಕೊರೋನಾ ತಡೆಗೆ ಸರ್ಕಾರ ಕೈಗೊಂಡಿರುವ ಅನನುಕೂಲಕರ ದಿಟ್ಟ ಕ್ರಮ. ಈ ಸಂದರ್ಭದಲ್ಲಿ ನಾಗರಿಕರು ಅಸಹಕಾರ ನೀಡಿದರೆ ಪೊಲೀಸರು ತಮ್ಮ ಕ್ರಮ ಕೈಗೊಳ್ಳಲೇ ಬೇಕಾಗುತ್ತದೆ. ಪೊಲೀಸರ ಪ್ರತಿ ನಡೆಯನ್ನೂ ಪ್ರಶ್ನೆ ಮಾಡುವ ಬದಲು ನಾಗರಿಕರು ತಮ್ಮ ಸ್ವಂತ ಚಲನೆ, ನಡೆಯನ್ನು ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಡಿಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ.

ತಮ್ಮ ಜೀವವನ್ನು ಅಪಾಯದಲ್ಲಿಟ್ಟು ನಾಗರಿಕರ ಹಿತರಕ್ಷಣೆಗೆ ಪೊಲೀಸರು ದುಡಿಯುತ್ತಿದ್ದಾರೆ.90 ಸಾವಿರ ಪೊಲೀಸರಲ್ಲಿ ಈಗಾಗಲೇ 13 ಸಾವಿರ ಪೊಲೀಸರು ಕೋವಿಡ್ ಸೋಂಕಿನಿಂದ ಬಳಲಿದ್ದಾರೆ. 130 ಪೊಲೀಸರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಕೊನೆಯಿಲ್ಲದ ವಾದಗಳಿಂದ ಯಾರಿಗೂ ಪ್ರಯೋಜನವಿಲ್ಲ, ಸುರಕ್ಷತೆಯೂ ಇಲ್ಲ. ಮನೆಯಿಂದ ಹೊರಬರದೆ ಮನೆಯಲ್ಲಿಯೇ ಇದ್ದು ಸುರಕ್ಷಿತವಾಗಿರಿ ಎಂದು ಅವರು ಟ್ವೀಟ್ ಮೂಲಕ ಕೋರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT