ಸಂಗ್ರಹ ಚಿತ್ರ 
ರಾಜ್ಯ

240 ಟನ್ ಆಕ್ಸಿಜನ್ ಹೊತ್ತ ರೈಲು ಇಂದು ನಗರಕ್ಕೆ ಆಗಮನ

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಲ್ಲಿ ಆಕ್ಸಿಜನ್ ಕೊರತೆ ಮುಂದುವರೆದಿರುವಂತೆಯೇ ಆಕ್ಸಿಜನ್ ಸಾಗಣೆ ಮಾಡುವ ಎರಡು ರೈಲುಗಳು ಶನಿವಾರ ಬೆಂಗಳೂರಿಗೆ ಆಗಮಿಸಲಿವೆ.

ಬೆಂಗಳೂರು: ಬೆಂಗಳೂರು: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಲ್ಲಿ ಆಕ್ಸಿಜನ್ ಕೊರತೆ ಮುಂದುವರೆದಿರುವಂತೆಯೇ ಆಕ್ಸಿಜನ್ ಸಾಗಣೆ ಮಾಡುವ ಎರಡು ರೈಲುಗಳು ಶನಿವಾರ ಬೆಂಗಳೂರಿಗೆ ಆಗಮಿಸಲಿವೆ.

ಮೇ 15ರ ಬೆಳಗ್ಗೆ 5 ಗಂಟೆಗೆ 120 ಟನ್ ಆಕ್ಸಿಜನ್ ಹೊತ್ತ ರೈಲು ಬೆಂಗಳೂರಿನ ವೈಟ್‌ಫೀಲ್ಡ್‌ಗೆ ಆಗಮಿಸಲಿದೆ. ಓಡಿಶಾ ರಾಜ್ಯದ ಕಾಳಿಂಗ ನಗರದಿಂದ ಶುಕ್ರವಾರ ಮಧ್ಯಾಹ್ನ 3.10ಕ್ಕೆ ರೈಲು ಹೊರಟಿದೆ.

ಜಾರ್ಖಂಡ್‌ನ ಟಾಟಾ ನಗರದಿಂದ 120 ಟನ್ ಆಕ್ಸಿಜನ್ ಹೊತ್ತ ರೈಲು ಶುಕ್ರವಾರ ಮಧ್ಯಾಹ್ನ 12.40ಕ್ಕೆ ಹೊರಟಿದೆ. ಬೆಂಗಳೂರಿನ ವೈಟ್‌ಫೀಲ್ಡ್‌ಗೆ ಶನಿವಾರ ಸಂಜೆ 5 ಗಂಟೆಗೆ ತಲುಪಲಿದೆ ಎಂದು ಭಾರತೀಯ ರೈಲ್ವೆ ಹೇಳಿದೆ.

ಈ ಎರಡೂ ರೈಲುಗಳು 6 ಆಕ್ಸಿಜನ್ ಕಂಟೈನರ್‌ಗಳನ್ನು ಒಳಗೊಂಡಿವೆ. ಎರಡೂ ರೈಲುಗಳಿಂದ ಒಟ್ಟು 240 ಟನ್ ಆಕ್ಸಿಜನ್ ಬೆಂಗಳೂರಿಗೆ ಬರಲಿದೆ. ಬಳಿಕ ಸರ್ಕಾರ ಅವುಗಳನ್ನು ಜಿಲ್ಲೆಗೆ ಸಾಗಣೆ ಮಾಡಲಿದೆ.

ಕರ್ನಾಟಕಕ್ಕೆ ಮೊದಲ ಆಕ್ಸಿಜನ್ ಎಕ್ಸ್‌ಪ್ರೆಸ್ ರೈಲು ಬುಧವಾರ ಆಗಮಿಸಿತ್ತು. 2 ಮತ್ತು 3ನೇ ರೈಲುಗಳು ಶನಿವಾರ ಬರಲಿವೆ. ಆಕ್ಸಿಜನ್ ಪೂರೈಕೆಯಿಂದಾಗಿ ರಾಜ್ಯದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಅನುಕೂಲವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT