ಸಂಗ್ರಹ ಚಿತ್ರ 
ರಾಜ್ಯ

ಅಯೋಧ್ಯೆಯ ರಾಮ ಮಂದಿರಕ್ಕಾಗಿ ಕುಂಭಾಶಿಯಲ್ಲಿ ಬ್ರಹ್ಮರಥ ನಿರ್ಮಾಣ ಕಾರ್ಯ ಪ್ರಾರಂಭ

ಅಯೋಧ್ಯೆಯ ಶ್ರೀ ರಾಮ ಮಂದಿರಕ್ಕೆ ಬ್ರಹ್ಮರಥ (ತೇರು) ನಿರ್ಮಾಣವು ಅಕ್ಷಯ ತೃತೀಯದ ಶುಭ ದಿನದಂದು ಕುಂದಾಪುರದ ಸಮೀಪದ ಕುಂಭಾಶಿಯಲ್ಲಿ ಪ್ರಾರಂಭವಾಗಿದೆ.

ಕುಂದಾಪುರ: ಅಯೋಧ್ಯೆಯ ಶ್ರೀ ರಾಮ ಮಂದಿರಕ್ಕೆ ಬ್ರಹ್ಮರಥ (ತೇರು) ನಿರ್ಮಾಣವು ಅಕ್ಷಯ ತೃತೀಯದ ಶುಭ ದಿನದಂದು ಕುಂದಾಪುರದ ಸಮೀಪದ ಕುಂಭಾಶಿಯಲ್ಲಿ ಪ್ರಾರಂಭವಾಗಿದೆ.

ಸುಮಾರು 4 ಕೋಟಿ ರೂ. ವೆಚ್ಚದ ಈ ಬ್ರಹ್ಮರಥ ಪೂರ್ಣಗೊಂಡ ನಂತರ ಕಿಷ್ಕಿಂದೆಯ ಹನುಮ ಜನ್ಮಭೂಮಿ ಕ್ಷೇತ್ರದ ಪರವಾಗಿ ರಾಮ ಮಂದಿರಕ್ಕೆ ಸೇರಲಿದೆ.

ಪ್ರಸಿದ್ದ ಶಿಲ್ಪಿಗಳಾದ ಕೋಟೇಶ್ವರ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರದ ಲಕ್ಷ್ನಿನಾರಾಯಣ ಆಚಾರ್ಯ ಮತ್ತು ರಾಜಗೋಪಾಲಾಚಾರ್ಯರು 50 ನುರಿತ ಕುಶಲಕರ್ಮಿಗಳ ತಂಡದ ಸಹಾಯದಿಂದ ಬ್ರಹ್ಮರಥದ ನಿರ್ಮಾಣ ಮಾಡಲಿದ್ದಾರೆ. ಈ ರಥ ಕುಕ್ಕೆ ಸುಬ್ರಹ್ಮಣ್ಯದಲ್ಲಿನ ರಥದ ಮಾದರಿಯಲ್ಲಿರಲಿದೆ.

84 ಅಡಿ ಎತ್ತರ ಮತ್ತು 26 ಅಡಿ ಅಗಲದ ರಥದಲ್ಲಿ 10 ಅಡಿ ಎತ್ತರದ ಚಕ್ರಗಳಿವೆ. ರಥದ ಮಂಟಪ ಐದು ಅಡಿಗಳಿದ್ದರೆ, ಕಲಶ ಸಹ ಅಷ್ಟೇ ಎತ್ತರವನ್ನು ಹೊಂದಿರಲಿದೆ. ರಥದ ತೂಕ 50 ಟನ್ ಆಗಿರಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT