ಕಂಟೈನ್ ಮೆಂಟ್ ವಲಯಗಳ ಪರಿಶೀಲನೆ 
ರಾಜ್ಯ

ಮಿತಿ ಮೀರುತ್ತಿರುವ ಕೋವಿಡ್ ಕೇಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಟೈನ್ ಮೆಂಟ್ ವಲಯಗಳ ಹೆಚ್ಚಳ!

ಕೋವಿಡ್ ಎರಡನೇ ಅಲೆ ರಾಜ್ಯಾದ್ಯಂತ ಹಲವು ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಟೈನ್ ಮೆಂಟ್ ವಲಯಗಳ ಸಂಖ್ಯೆಯು ಹೆಚ್ಚುತ್ತಿದೆ.

ಮಂಗಳೂರು: ಕೋವಿಡ್ ಎರಡನೇ ಅಲೆ ರಾಜ್ಯಾದ್ಯಂತ ಹಲವು ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಟೈನ್ ಮೆಂಟ್ ವಲಯಗಳ ಸಂಖ್ಯೆಯು ಹೆಚ್ಚುತ್ತಿದೆ.

ದಕ್ಷಿಣ  ಕನ್ನಡ ಜಿಲ್ಲೆಯಲ್ಲಿ ಕೇವಲ ನಾಲ್ಕು ದಿನದಲ್ಲಿ 50 ಇದ್ದ ಕಂಟೈನ್ ಮೆಂಟ್ ವಲಯ 132 ಕ್ಕೆ ಏರಿಕೆಯಾಗಿದೆ.  ಶುಕ್ರವಾರ 15 ಸ್ಥಳಗಳನ್ನುಕಂಟೈನ್ ಮೆಂಟ್ ಜೋನ್ ಎಂದು ಘೋಷಿಸಲಾಗಿದೆ.

ಮಂಗಳೂರಿನಲ್ಲಿ 56, ಬಂಟ್ವಾಳದಲ್ಲಿ 39,  ಬೆಳ್ತಂಗಡಿ 21, ಸುಳ್ಯ 10 ಮತ್ತು ಪುತ್ತೂರಿನಲ್ಲಿ 7 ಕಂಟೈನ್ ಮೆಂಟ್ ವಲಯಗಳನ್ನು ಗುರುತಿಸಲಾಗಿದೆ. 

ಶುಕ್ರವಾರ ಬೆಳ್ತಂಗಡಿಯ ಕಲ್ಲಗುಡ್ಡದಲ್ಲಿ 26 ಹೊಸ ಕೋವಿಡ್ ಪಾಸಿಟಿವ್ ಕೇಸ್ ಗಳು ವರದಿಯಾಗಿವೆ.ಏಪ್ರಿಲ್ ಮಧ್ಯ ಭಾಗದಿಂದ ಜಿಲ್ಲೆಯಲ್ಲಿ ಕೋವಿಡ್ ಕೇಸ್ ಸಂಖ್ಯೆ ಹೆಚ್ಚುತ್ತಿವೆ ಎಂದು ದಕ್ಷಿಣ ಕನ್ನಡ  ನೋಡಲ್ ಅಧಿಕಾರಿ ಡಾ. ಅಶೋಕ್ ತಿಳಿಸಿದ್ದಾರೆ.

ಕಂಟೈನ್ ಮೆಂಟ್ ವಲಯಗಳಲ್ಲಿನ ಜನರಿಗೆ ಅಗತ್ಯ ಸೇವೆ ದೊರೆಯುವಂತೆ ನೋಡಿಕೊಳ್ಳಲು ಜಿಲ್ಲಾ ಆರೋಗ್ಯ ಇಲಾಖೆ ಗ್ರಾಮ ಪಂಚಾಯಿತಿಗಳು ಮತ್ತು ನಗರ ನಿಗಮಕ್ಕೆ ನಿರ್ದೇಶನ ನೀಡಿದೆ. 

ಎಂಪಿ ಡಬ್ಲ್ಯೂ ಮತ್ತು ಆಶಾ ಕಾರ್ಯಕರ್ತೆಯರಿಗೆ ಪ್ರತಿದಿನವೂ ಪಾಸಿಟಿವ್ ಪ್ರಕರಣಗಳು ಮತ್ತು ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳ ಬಗ್ಗೆ ನಿಗಾ ಇಡಲು ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT