ಕಂಟೈನ್ ಮೆಂಟ್ ವಲಯಗಳ ಪರಿಶೀಲನೆ 
ರಾಜ್ಯ

ಮಿತಿ ಮೀರುತ್ತಿರುವ ಕೋವಿಡ್ ಕೇಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಟೈನ್ ಮೆಂಟ್ ವಲಯಗಳ ಹೆಚ್ಚಳ!

ಕೋವಿಡ್ ಎರಡನೇ ಅಲೆ ರಾಜ್ಯಾದ್ಯಂತ ಹಲವು ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಟೈನ್ ಮೆಂಟ್ ವಲಯಗಳ ಸಂಖ್ಯೆಯು ಹೆಚ್ಚುತ್ತಿದೆ.

ಮಂಗಳೂರು: ಕೋವಿಡ್ ಎರಡನೇ ಅಲೆ ರಾಜ್ಯಾದ್ಯಂತ ಹಲವು ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಟೈನ್ ಮೆಂಟ್ ವಲಯಗಳ ಸಂಖ್ಯೆಯು ಹೆಚ್ಚುತ್ತಿದೆ.

ದಕ್ಷಿಣ  ಕನ್ನಡ ಜಿಲ್ಲೆಯಲ್ಲಿ ಕೇವಲ ನಾಲ್ಕು ದಿನದಲ್ಲಿ 50 ಇದ್ದ ಕಂಟೈನ್ ಮೆಂಟ್ ವಲಯ 132 ಕ್ಕೆ ಏರಿಕೆಯಾಗಿದೆ.  ಶುಕ್ರವಾರ 15 ಸ್ಥಳಗಳನ್ನುಕಂಟೈನ್ ಮೆಂಟ್ ಜೋನ್ ಎಂದು ಘೋಷಿಸಲಾಗಿದೆ.

ಮಂಗಳೂರಿನಲ್ಲಿ 56, ಬಂಟ್ವಾಳದಲ್ಲಿ 39,  ಬೆಳ್ತಂಗಡಿ 21, ಸುಳ್ಯ 10 ಮತ್ತು ಪುತ್ತೂರಿನಲ್ಲಿ 7 ಕಂಟೈನ್ ಮೆಂಟ್ ವಲಯಗಳನ್ನು ಗುರುತಿಸಲಾಗಿದೆ. 

ಶುಕ್ರವಾರ ಬೆಳ್ತಂಗಡಿಯ ಕಲ್ಲಗುಡ್ಡದಲ್ಲಿ 26 ಹೊಸ ಕೋವಿಡ್ ಪಾಸಿಟಿವ್ ಕೇಸ್ ಗಳು ವರದಿಯಾಗಿವೆ.ಏಪ್ರಿಲ್ ಮಧ್ಯ ಭಾಗದಿಂದ ಜಿಲ್ಲೆಯಲ್ಲಿ ಕೋವಿಡ್ ಕೇಸ್ ಸಂಖ್ಯೆ ಹೆಚ್ಚುತ್ತಿವೆ ಎಂದು ದಕ್ಷಿಣ ಕನ್ನಡ  ನೋಡಲ್ ಅಧಿಕಾರಿ ಡಾ. ಅಶೋಕ್ ತಿಳಿಸಿದ್ದಾರೆ.

ಕಂಟೈನ್ ಮೆಂಟ್ ವಲಯಗಳಲ್ಲಿನ ಜನರಿಗೆ ಅಗತ್ಯ ಸೇವೆ ದೊರೆಯುವಂತೆ ನೋಡಿಕೊಳ್ಳಲು ಜಿಲ್ಲಾ ಆರೋಗ್ಯ ಇಲಾಖೆ ಗ್ರಾಮ ಪಂಚಾಯಿತಿಗಳು ಮತ್ತು ನಗರ ನಿಗಮಕ್ಕೆ ನಿರ್ದೇಶನ ನೀಡಿದೆ. 

ಎಂಪಿ ಡಬ್ಲ್ಯೂ ಮತ್ತು ಆಶಾ ಕಾರ್ಯಕರ್ತೆಯರಿಗೆ ಪ್ರತಿದಿನವೂ ಪಾಸಿಟಿವ್ ಪ್ರಕರಣಗಳು ಮತ್ತು ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳ ಬಗ್ಗೆ ನಿಗಾ ಇಡಲು ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

B-52 Bomber Bursts: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಭೀಕರ ವಿಮಾನ ಅಪಘಾತ, ಬಿ-52 ಬಾಂಬರ್ ಪತನ, 8 ಮಂದಿ ಸಾವು! Video

'ಆಸ್ತಿ ಘೋಷಿಸಲು ಕುಮಾರಸ್ವಾಮಿ ಸಿದ್ಧವೇ?: ಡಿಕೆ ಶಿವಕುಮಾರ್ ನಿಮ್ಮ ಇಡೀ ಕುಟುಂಬದ ಜಾತಕ ಬಿಚ್ಚಿಡಲಿದ್ದಾರೆ'

15 ಕೋಟಿ ರೂ. ಕೊಟ್ರೆ ದುಬೈ ಶೇಖ್ ಜೊತೆ ಮಲಗಬಹುದು! Influencer ಅಪೂರ್ವ ಮುಖಿಜಾ Video ಮತ್ತೆ ವೈರಲ್! ಏನಿದು ಹೊಸ ವಿವಾದ?

ಸ್ಯಾಂಡಲ್ ವುಡ್ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ನಿಧನ!

ಶಕ್ತಿ ಯೋಜನೆಯಡಿ 'ಸ್ಮಾರ್ಟ್ ಕಾರ್ಡ್' ವಿತರಣೆಗೆ ಅಂತಿಮ ಸಿದ್ಧತೆ- ಸಚಿವ ಬೈರತಿ ಸುರೇಶ್

SCROLL FOR NEXT