ಸಂಗ್ರಹ ಚಿತ್ರ 
ರಾಜ್ಯ

ಮಂಗಳೂರು: ಕೋವಿಡ್ ರೋಗಿಗೆ ಲೈಂಗಿಕ ಕಿರುಕುಳ ನೀಡಿದ್ದ ಆಂಬ್ಯುಲೆನ್ಸ್ ಸಹಾಯಕ ಸೆರೆ

ಕೋವಿಡ್ -19 ರೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆಂಬ್ಯುಲೆನ್ಸ್ ಸಹಾಯಕರನ್ನು ಪೊಲೀಸರು ಶುಕ್ರವಾರ ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸಧ್ಯ ಸಂತ್ರಸ್ತೆಯನ್ನು ಚಿಕಿತ್ಸೆಯ ಭಾಗವಾಗಿ ಸ್ಕ್ಯಾನಿಂಗ್ ಕೇಂದ್ರಕ್ಕೆ ಕರೆದೊಯ್ಯಲಾಯಿತು.

ಮಂಗಳೂರು: ಕೋವಿಡ್ -19 ರೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆಂಬ್ಯುಲೆನ್ಸ್ ಸಹಾಯಕರನ್ನು ಪೊಲೀಸರು ಶುಕ್ರವಾರ ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸಧ್ಯ ಸಂತ್ರಸ್ತೆಯನ್ನು ಚಿಕಿತ್ಸೆಯ ಭಾಗವಾಗಿ ಸ್ಕ್ಯಾನಿಂಗ್ ಕೇಂದ್ರಕ್ಕೆ ಕರೆದೊಯ್ಯಲಾಯಿತು.

ಏಪ್ರಿಲ್ 27 ರಂದು ಈ ಘಟನೆ ನಡೆದಿದೆ ಎಂದು ಪೆರಿಂತಲಮಣ್ಣಪೊಲೀಸರು ತಿಳಿಸಿದ್ದಾರೆ ಆದರೆ ಸಂತ್ರಸ್ತೆ ಈ ಬಗ್ಗೆ ಈಗಷ್ಟೇ ವೈದ್ಯರಲ್ಲಿ ಮಾಹಿತಿ ನೀಡಿದ್ದಾರೆ. ಆಸ್ಪತ್ರೆಯಿಂದ ಮಾಹಿತಿ ಪಡೆದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಂತ್ರಸ್ತೆ ನ್ಯುಮೋನಿಯಾ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಂಡೂರು ಮೂಲದ ರೋಗಿಗೆ  ಆಂಬ್ಯುಲೆನ್ಸ್ ಸಹಾಯಕ ಪ್ರಶಾಂತ್ ಲೈಂಗಿಕ ಕಿರುಕುಳ ನೀಡಿದ್ದು, ಏಪ್ರಿಲ್ 27 ರಂದು ಆಂಬ್ಯುಲೆನ್ಸ್‌ನಲ್ಲಿ ಆಕೆಗೆ ಈ ಬಗೆಯಲ್ಲಿ ಕಿರುಕುಳ ನೀಡಲಾಗಿತ್ತು. ಆದರೆ ಈ ಘಟನೆ ಬಗ್ಗೆ ದೂರು ಸಲ್ಲಿಸಲು ಮಾಡಿದ ವಿಳಂಬಕ್ಕೆ ಕಾರಣವೆಂದರೆ ಸಂತ್ರಸ್ತೆ ಘಟನೆಯ ನಂತರ ದೈಹಿಕವಾಗಿ ಮತ್ತು ಮಾನಸಿಕವಾಗಿ ಕುಗ್ಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದಕ್ಕೆ ಮುನ್ನ ಕೇರಳದ ತಿರುವನಂತಪುರಂ ಹಾಗೂ ಪಥನಮತ್ತಟ್ಟ ಜಿಲ್ಲೆಗಳಲ್ಲಿ ಸಹ ಇಂತಹಾ ಘಟನೆಗಳು ವರದಿಯಾಗಿದ್ದವು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT