ಸಂಗ್ರಹ ಚಿತ್ರ 
ರಾಜ್ಯ

'ಟೌಕ್ಟೇ' ಚಂಡಮಾರುತ: ಭಟ್ಕಳದ ಮೀನುಗಾರ ಸಾವು

'ಟೌಕ್ಟೇ' ಚಂಡಮಾರುತ ಪ್ರಭಾವದಿಂದಾಗಿ ಅರಬ್ಬಿ ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ಹೊರಹೊಮ್ಮುತ್ತಿದ್ದು, ಮೀನುಗಾರರೊಬ್ಬರು ಮೃತಪಟ್ಟಿದ್ದಾರೆ.

ಕಾರವಾರ (ಉತ್ತರ ಕನ್ನಡ): 'ಟೌಕ್ಟೇ' ಚಂಡಮಾರುತ ಪ್ರಭಾವದಿಂದಾಗಿ ಅರಬ್ಬಿ ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ಹೊರಹೊಮ್ಮುತ್ತಿದ್ದು, ಮೀನುಗಾರರೊಬ್ಬರು ಮೃತಪಟ್ಟಿದ್ದಾರೆ.

ಭಟ್ಕಳದ ಜಾಲಿಕೋಡಿಯಲ್ಲಿ ನೀರು ಪಾಲಾಗುತ್ತಿದ್ದ ದೋಣಿಯನ್ನು ದಡಕ್ಕೆ ತರಲು ಹೋಗಿದ್ದ ಮೀನುಗಾರನೊಬ್ಬ ಎರಡು ದೋಣಿಗಳ ಮಧ್ಯೆ ಸಿಲುಕಿ ಮೃತಪಟ್ಟಿದ್ದಾರೆ. 

ಮೃತರನ್ನು ಜಾಲಿಕೋಡಿ ನಿವಾಸಿ ಲಕ್ಷ್ಮಣ ಈರಪ್ಪ ನಾಯ್ಕ (60) ಎಂದು ಗುರುತಿಸಲಾಗಿದೆ.

ದಡದಲ್ಲಿ ಲಂಗರು ಹಾಕಿದ್ದ ದೋಣಿಯೊಂದು ಅಲೆಗಳ ಹೊಡೆತಕ್ಕೆ ನೀರುಪಾಲಾಗುತ್ತಿತ್ತು. ಹೀಗಾಗಿ ಅದನ್ನು ತಡೆದು ದಡದಿಂದ ಮೇಲೆ ತರಲು ಮೀನುಗಾರ ನೀರಿಗೆ ಇಳಿದಿದ್ದರು. ಈ ವೇಳೆ ಅಪ್ಪಳಿಸಿದ ಅಲೆಗೆ ಮತ್ತೊಂದು ದೋಣಿಯು ಅವರನ್ನು ದಡದಿಂದ ಮೇಲೆ ತರಬೇಕಿದ್ದ ದೋಣಿಯ ಮಧ್ಯೆ ಸಿಲುಕಿಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರು ಕೊನೆಯುಸಿರೆಳೆದರು ಎಂದು ಸ್ಥಳೀಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT