ಸಚಿವ ಮುರುಗೇಶ್ ನಿರಾಣಿ 
ರಾಜ್ಯ

ಖನಿಜ ಅಭಿವೃದ್ಧಿ ನಿಧಿಯಿಂದ ರಾಜ್ಯಕ್ಕೆ ಆಕ್ಸಿಜನ್ ಟ್ಯಾಂಕರ್ ಗಳ ಖರೀದಿ: ಸಚಿವ ಮುರುಗೇಶ್ ನಿರಾಣಿ

ಖನಿಜ ಅಭಿವೃದ್ಧಿ ನಿಧಿ (ಎಂಡಿಎಫ್)ಯಿಂದ ರಾಜ್ಯಕ್ಕೆ ಆಕ್ಸಿಜನ್ ಟ್ಯಾಂಕರ್'ಗಳು, ಆಕ್ಸಿಜನ್ ಸಾಂದ್ರಕಗಳು, ಆಕ್ಸಿಮೀಟರ್‌ಗಳು ಹಾಗೂ ಇತರೆ ತುರ್ತು ವೈದ್ಯಕೀಯ ಆಗತ್ಯಗಳನ್ನು ಖರೀದಿ ಮಡಾಲಾಗುತ್ತದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿಯವರು ಹೇಳಿದ್ದಾರೆ. 

ಬೆಂಗಳೂರು: ಖನಿಜ ಅಭಿವೃದ್ಧಿ ನಿಧಿ (ಎಂಡಿಎಫ್)ಯಿಂದ ರಾಜ್ಯಕ್ಕೆ ಆಕ್ಸಿಜನ್ ಟ್ಯಾಂಕರ್'ಗಳು, ಆಕ್ಸಿಜನ್ ಸಾಂದ್ರಕಗಳು, ಆಕ್ಸಿಮೀಟರ್‌ಗಳು ಹಾಗೂ ಇತರೆ ತುರ್ತು ವೈದ್ಯಕೀಯ ಆಗತ್ಯಗಳನ್ನು ಖರೀದಿ ಮಡಾಲಾಗುತ್ತದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿಯವರು ಹೇಳಿದ್ದಾರೆ. 

ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್ ನಿರಾಣಿಯವರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸಭೆಯಲ್ಲಿ ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಉಂಟಾದ ಬಿಕ್ಕಟ್ಟನ್ನು ನಿಭಾಯಿಸಲು ಜಿಲ್ಲಾ ಖನಿಜ ಪ್ರತಿಷ್ಠಾನ (ಡಿಎಂಎಫ್) ನಿಧಿಯಡಿ ಲಭ್ಯವಿರುವ ಹಣವನ್ನು ಬಳಸಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. 

10 ಜಿಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಅಳವಡಿಸಲಾಗುತ್ತದೆ. ಆರೋಗ್ಯ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಿ ಗಣಿ ಮತ್ತು ಭೂ ವಿಜ್ಞಾನ ವಿಭಾಗದ ಸಮಿತಿ ಆಸ್ಪತ್ರೆ ಗುರಿತಿಸಬೇಕು. ಇದಲ್ಲದೇ, ಗಣಿ ಇಲಾಖೆಯಿಂದ ಒಂದು ಸಾವಿರ ಆಮ್ಲಜನಕ ಸಾಂದ್ರಕಗಳನ್ನು ಸಂಗ್ರಹಿಸಿ, ಅವುಗಳನ್ನು ಎಲ್ಲಾ ಜಿಲ್ಲೆಗಳಿಗೆ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆಂದು ತಿಳಿದುಬಂದಿದೆ. 

ಹೆಚ್ಚಿನ ಸಂಖ್ಯೆಯಲ್ಲಿ ಆಕ್ಸಿಮೀಟರ್ ಗಳನ್ನು ಸಂಗ್ರಹಿಸಿ ಗ್ರಾಮ ಪಂಚಾಯಿತಿ ಆರೋಗ್ಯ ಸಮಿತಿಗಳಿಗೆ ನೀಡಬೇಕು. ಇದನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೀಡಿದರೆ, ಗ್ರಾಮಸ್ಥರಿಗೆ ಆಮ್ಮಜನಕದ ಶುದ್ಧತ್ವವನ್ನು ನಿಯಮಿತವಾಗಿ ಪರಿಶೀಲಿಸಬಹುದು ಎಂದು ಸಲಹೆ ನೀಡಿದ್ದಾರೆನ್ನಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video