ಸಚಿವ ಮುರುಗೇಶ್ ನಿರಾಣಿ 
ರಾಜ್ಯ

ಖನಿಜ ಅಭಿವೃದ್ಧಿ ನಿಧಿಯಿಂದ ರಾಜ್ಯಕ್ಕೆ ಆಕ್ಸಿಜನ್ ಟ್ಯಾಂಕರ್ ಗಳ ಖರೀದಿ: ಸಚಿವ ಮುರುಗೇಶ್ ನಿರಾಣಿ

ಖನಿಜ ಅಭಿವೃದ್ಧಿ ನಿಧಿ (ಎಂಡಿಎಫ್)ಯಿಂದ ರಾಜ್ಯಕ್ಕೆ ಆಕ್ಸಿಜನ್ ಟ್ಯಾಂಕರ್'ಗಳು, ಆಕ್ಸಿಜನ್ ಸಾಂದ್ರಕಗಳು, ಆಕ್ಸಿಮೀಟರ್‌ಗಳು ಹಾಗೂ ಇತರೆ ತುರ್ತು ವೈದ್ಯಕೀಯ ಆಗತ್ಯಗಳನ್ನು ಖರೀದಿ ಮಡಾಲಾಗುತ್ತದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿಯವರು ಹೇಳಿದ್ದಾರೆ. 

ಬೆಂಗಳೂರು: ಖನಿಜ ಅಭಿವೃದ್ಧಿ ನಿಧಿ (ಎಂಡಿಎಫ್)ಯಿಂದ ರಾಜ್ಯಕ್ಕೆ ಆಕ್ಸಿಜನ್ ಟ್ಯಾಂಕರ್'ಗಳು, ಆಕ್ಸಿಜನ್ ಸಾಂದ್ರಕಗಳು, ಆಕ್ಸಿಮೀಟರ್‌ಗಳು ಹಾಗೂ ಇತರೆ ತುರ್ತು ವೈದ್ಯಕೀಯ ಆಗತ್ಯಗಳನ್ನು ಖರೀದಿ ಮಡಾಲಾಗುತ್ತದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿಯವರು ಹೇಳಿದ್ದಾರೆ. 

ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್ ನಿರಾಣಿಯವರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸಭೆಯಲ್ಲಿ ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಉಂಟಾದ ಬಿಕ್ಕಟ್ಟನ್ನು ನಿಭಾಯಿಸಲು ಜಿಲ್ಲಾ ಖನಿಜ ಪ್ರತಿಷ್ಠಾನ (ಡಿಎಂಎಫ್) ನಿಧಿಯಡಿ ಲಭ್ಯವಿರುವ ಹಣವನ್ನು ಬಳಸಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. 

10 ಜಿಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಅಳವಡಿಸಲಾಗುತ್ತದೆ. ಆರೋಗ್ಯ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಿ ಗಣಿ ಮತ್ತು ಭೂ ವಿಜ್ಞಾನ ವಿಭಾಗದ ಸಮಿತಿ ಆಸ್ಪತ್ರೆ ಗುರಿತಿಸಬೇಕು. ಇದಲ್ಲದೇ, ಗಣಿ ಇಲಾಖೆಯಿಂದ ಒಂದು ಸಾವಿರ ಆಮ್ಲಜನಕ ಸಾಂದ್ರಕಗಳನ್ನು ಸಂಗ್ರಹಿಸಿ, ಅವುಗಳನ್ನು ಎಲ್ಲಾ ಜಿಲ್ಲೆಗಳಿಗೆ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆಂದು ತಿಳಿದುಬಂದಿದೆ. 

ಹೆಚ್ಚಿನ ಸಂಖ್ಯೆಯಲ್ಲಿ ಆಕ್ಸಿಮೀಟರ್ ಗಳನ್ನು ಸಂಗ್ರಹಿಸಿ ಗ್ರಾಮ ಪಂಚಾಯಿತಿ ಆರೋಗ್ಯ ಸಮಿತಿಗಳಿಗೆ ನೀಡಬೇಕು. ಇದನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೀಡಿದರೆ, ಗ್ರಾಮಸ್ಥರಿಗೆ ಆಮ್ಮಜನಕದ ಶುದ್ಧತ್ವವನ್ನು ನಿಯಮಿತವಾಗಿ ಪರಿಶೀಲಿಸಬಹುದು ಎಂದು ಸಲಹೆ ನೀಡಿದ್ದಾರೆನ್ನಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT