ಸಿದ್ದರಾಮಯ್ಯ 
ರಾಜ್ಯ

ರಾಜ್ಯ ಸರ್ಕಾರ ಕೊರೋನಾದಿಂದ ಮೃತಪಟ್ಟವರ ಸಾವಿನ ಸಂಖ್ಯೆಯಲ್ಲಿ ಸುಳ್ಳು ಹೇಳುತ್ತಿದೆ- ಸಿದ್ದರಾಮಯ್ಯ

ಕೊರೋನಾ ಪರೀಕ್ಷೆ ಮತ್ತು ಸೋಂಕಿತರ ಸಾವಿನ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ. ಪರೀಕ್ಷೆ ಪ್ರಮಾಣವನ್ನು ಕೂಡಲೇ ಹೆಚ್ವಿಸಿ ಕೋವಿಡ್ ನಿಂದಾದ ಮರಣಗಳನ್ನು ನಿಖರವಾಗಿ ದಾಖಲಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. 

ಬೆಂಗಳೂರು: ಕೊರೋನಾ ಪರೀಕ್ಷೆ ಮತ್ತು ಸೋಂಕಿತರ ಸಾವಿನ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ. ಪರೀಕ್ಷೆ ಪ್ರಮಾಣವನ್ನು ಕೂಡಲೇ ಹೆಚ್ವಿಸಿ ಕೋವಿಡ್ ನಿಂದಾದ ಮರಣಗಳನ್ನು ನಿಖರವಾಗಿ ದಾಖಲಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. 

ಈ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ತಜ್ಞರ ಪ್ರಕಾರ ವೈರಸ್ಸಿನ ಅಲೆ ಕಡಿಮೆಯಾಗುವುದೆಂದರೆ ಪರೀಕ್ಷೆಗಳನ್ನು ನಡೆಸಿದಾಗ  ಪಾಸಿಟಿವಿಟಿ ದರ ಶೇ. 5 ಕ್ಕಿಂತ ಕಡಿಮೆಯಾಗಬೇಕು.ವಾಸ್ತವದಲ್ಲಿ ರಾಜ್ಯದಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗುವುದರ ಬದಲು ಹೆಚ್ಚಾಗುತ್ತಿದೆ ಎಂದಿದ್ದಾರೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಳ್ಳಾರಿ, ಹಾಸನ, ಮೈಸೂರು, ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮುಂತಾದ ಜಿಲ್ಲೆಗಳ ಪಾಸಿಟಿವಿಟಿ ದರ ಶೇ. 50 ಕ್ಕಿಂತ ಹೆಚ್ಚಿಗೆ ಇದೆ. ಇನ್ನುಳಿದ ಜಿಲ್ಲೆಗಳಲ್ಲೂ  ಪಾಸಿಟಿವಿಟಿ ದರ ಶೇ. 35 ರ ಆಸುಪಾಸಿನಲ್ಲೇ ಇದೆ. ಆದರೆ, ರಾಜ್ಯ ಸರ್ಕಾರ ಸೋಂಕಿತರ ಪ್ರಮಾಣ  ಇಳಿಮುಖವಾಗಿದೆಯೆಂದು ತೋರಿಸಲು ಸೋಂಕು ಪರೀಕ್ಷೆಯನ್ನೇ ಕಡಿಮೆ ಮಾಡಿದೆ. ಇದು ನಾಡಿನ ಜನತೆಗೆ ಎಸಗುತ್ತಿರುವ ದ್ರೋಹವಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ, ಜನರನ್ನು ಕತ್ತಲಲ್ಲಿಟ್ಟು ಕೊರೊನಾ ನಿಯಂತ್ರಿಸಲು ಸಾಧ್ಯವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಇಂದಿನಿಂದಲೇ ಕೊರೊನಾ ಸೋಂಕು ಪರೀಕ್ಷೆಯನ್ನು ಹೆಚ್ಚಿಸಬೇಕು, ಮಕ್ಕಳಿಗೂ ವ್ಯಾಕ್ಸಿನ್ ನೀಡಲು ಕ್ರಮ ಕೈಗೊಳ್ಳಬೇಕು ಮತ್ತು ಕೊರೊನಾ  ಮರಣಗಳನ್ನು ವಸ್ತುನಿಷ್ಠವಾಗಿ ದಾಖಲಿಸಿ, ಪ್ರತಿ ತಿಂಗಳು ಸಾವಿನ ಪ್ರಮಾಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಬೇಕು  ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT