ಸಿಎಂ ಯಡಿಯೂರಪ್ಪ 
ರಾಜ್ಯ

ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಣೆ ಕುರಿತು ಚರ್ಚೆ ನಡೆಯುತ್ತಿದೆ, ಕಪ್ಪು ಶಿಲೀಂಧ್ರ ನಿಭಾಯಿಸಲು ಸಿದ್ಧ: ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ವಿಸ್ತರಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ, ಆದರೆ ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಲಾಕ್ ಡೌನ್ ವಿಸ್ತರಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ, ಆದರೆ ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಹೇಳಿದ್ದಾರೆ. 

ಇಂದು ನಗರದಲ್ಲಿ ಲಾಕ್‌ಡೌನ್ ವಿಸ್ತರಣೆ ಮತ್ತು ಪ್ಯಾಕೇಜ್ ಘೋಷಿಸುವ ಬಗ್ಗೆ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, "ನಾನು ಅದನ್ನು ಚರ್ಚಿಸುತ್ತಿದ್ದೇನೆ, ನಿಮಗೆ ತಿಳಿಸುತ್ತೇನೆ. ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ" ಎಂದರು.

ಪ್ರಸ್ತುತ ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ಮೇ 24ಕ್ಕೆ ಅಂತ್ಯವಾಗಲಿದ್ದು, ಸಚಿವರು ಸೇರಿದಂತೆ ಹಲವು ನಾಯಕರು ಲಾಕ್ ಡೌನ್ ವಿಸ್ತರಿಸುವ ಒಲವು ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸರ್ಕಾರವು ಆರಂಭದಲ್ಲಿ ಏಪ್ರಿಲ್ 27 ರಿಂದ 14 ದಿನ "ಲಾಕ್ ಡೌನ್" ಘೋಷಿಸಿತ್ತು, ಆದರೆ ತರುವಾಯ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಮೇ 10 ರಿಂದ ಮೇ 24 ರವರೆಗೆ ಸಂಪೂರ್ಣ ಲಾಕ್‌ಡೌನ್ ವಿಧಿಸಿತು.

ಲಾಕ್ ಡೌನ್ ವಿಸ್ತರಣೆ ಪರ ಬ್ಯಾಟಿಂಗ್ ಮಾಡುತ್ತಿರುವ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ಕಂದಾಯ ಸಚಿವ ಆರ್.ಅಶೋಕ, ಬೆಂಗಳೂರಿನಲ್ಲಿ ದೈನಂದಿನ ಹೊಸ ಪ್ರಕರಣಗಳು 22,000 ದಿಂದ 8,000 ಕ್ಕೆ ಇಳಿದಿರುವುದರಿಂದ ಲಾಕ್‌ಡೌನ್ ಉಪಯುಕ್ತವಾಗಿದೆ ಮತ್ತು ಲಾಕ್ ವಿಸ್ತರಿಸಿದರೆ ಒಳ್ಳೆಯದು ಎಂದರು.

ಇನ್ನು ಕಪ್ಪು ಶಿಲೀಂಧ್ರ ಸೋಂಕಿನ ಬಗ್ಗೆ ತಜ್ಞರೊಂದಿಗಿನ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ ಕೆ ಸುಧಾಕರ್ ಅವರು, ಕಪ್ಪು ಶಿಲೀಂಧ್ರ ನಿಭಾಯಿಸಲು ರಾಜ್ಯ ಸರ್ಕಾರ ಸಂಪೂರ್ಣ ಸಿದ್ಧವಾಗಿದೆ, ನಿನ್ನೆ ತನಕ ರಾಜ್ಯದಲ್ಲಿ 97 ಜನ ಕಪ್ಪು ಶಿಲೀಂಧ್ರ ಕಾಯಿಲೆಗೆ ತುತ್ತಾಗಿದ್ದಾರೆ ಎಂದರು.

ಆದಾಗ್ಯೂ, ಇದು ಕೊರೋನಾ ವೈರಸ್ ನಂತೆ ಬೇರೆಯವರಿಗೆ ಹರಡದ ಕಾರಣ ಭಯಪಡಬೇಡಿ ಎಂದು ಅವರು ಜನರಿಗೆ ಮನವಿ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT